Home News ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ

ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬ ಬಲಿ

Hindu neighbor gifts plot of land

Hindu neighbour gifts land to Muslim journalist

ನಗರದಲ್ಲಿ ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ರೈಲ್ವೇ ಮೇಲ್ಸೇತುವೆ ಬಳಿ‌ ಘಟನೆ ನಡೆದಿದೆ.

ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬೈಕ್​​ ಮೇಲೆ ಹೋಗುತ್ತಿದ್ದ ದೇವಣ್ಣನ ಮೇಲೆ ಬಿಬಿಎಂಪಿ‌ ಕಸದ ಲಾರಿ ಹರಿದಿದೆ. ಇದರ ಪರಿಣಾಮ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವುನ್ನಪ್ಪಿರೋ ಘಟನೆ ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಬಳಿ ಈ ಘಟನೆ ಸಂಭವಿಸಿದೆ.

ದೇವಣ್ಣ (25) ಮೃತ ದುರ್ದೈವಿ. ಈತ ಯಾದಗಿರಿಯ ಸುರಪುರ ಮೂಲದವ. ದೇವಣ್ಣ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಿಬಿಎಂಪಿ ಕಸದ ಲಾರಿಗಳಿಗೆ ಇನ್ನೆಷ್ಟು ಬಲಿ ಬೇಕು ಎಂದು ಸಾರ್ವಜನಿಕರು ಹಿಡಿಶಾಪ ಹಾಕ್ತಿದ್ದಾರೆ.