Home Education ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

Hindu neighbor gifts plot of land

Hindu neighbour gifts land to Muslim journalist

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ, ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ದಾಳಿ ನಡೆಸಿದ್ದು, ಮನೆ ಬಳಿ ದಾಂಧಲೆ ನಡೆಸಿದ್ದಾರೆ. ಬೆಂಕಿ ಹಚ್ಚುವ ಕೆಲಸ ಮಾಡಿದ್ದು, ಇದು ಗೂಂಡಾಗಳ ರೀತಿಯಲ್ಲಿ ವರ್ತಿಸುವ ಕೆಲಸ.‌ ಅವರಿಗೆ ತಕ್ಕ ಪಾಠ ಕಲಿಸಲಾಗುತ್ತದೆ. ಇಂಥಹ ವರ್ತನೆ ಇನ್ನು ಮುಂದೆ ನಡೆಯಬಾರದು ಎಂದಿದ್ದಾರೆ.

ಈ ಘಟನೆ ಮೊದಲೇ ಪ್ಲಾನ್ ಹಾಕಿ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಯಾಕೆಂದರೆ ಸಚಿವ ನಾಗೇಶ್ ಅವರ ಮನೆ ಮೇಲೆ ದಾಳಿ ನಡೆಸಲು ಬೆಂಗಳೂರಿನಿಂದ ಐದು ಜನ, ಭದ್ರಾವತಿಯಿಂದ ಒಬ್ಬ, ಚಿಕ್ಕಮಗಳೂರು, ದಾವಣಗೆರೆಯಿಂದ ತಲಾ ಇಬ್ಬರು ಬಂದಿದ್ದಾರೆ. ಹೀಗಾಗಿ ಇದು ಅನುಮಾನಕ್ಕೆ ಎಡವು ಮಾಡಿಕೊಟ್ಟಿದೆ.