Home Interesting ಮರದಿಂದ ಹಣ್ಣು ಕೊಯ್ಯಲು ಯುವಕನೋರ್ವನ ಜುಗಾಡ್ ಐಡಿಯಾಕ್ಕೆ ಮನಸೋತ ಆನಂದ್ ಮಹೀಂದ್ರಾ!!!

ಮರದಿಂದ ಹಣ್ಣು ಕೊಯ್ಯಲು ಯುವಕನೋರ್ವನ ಜುಗಾಡ್ ಐಡಿಯಾಕ್ಕೆ ಮನಸೋತ ಆನಂದ್ ಮಹೀಂದ್ರಾ!!!

Hindu neighbor gifts plot of land

Hindu neighbour gifts land to Muslim journalist

ಕಸದಿಂದ ರಸ ತೆಗೆಯೋದರಲ್ಲಿ ಭಾರತೀಯರು ಸೂಪರ್ ಫಾಸ್ಟ್. ಇದಕ್ಕೆ ಅನೇಕ ಉದಾಹರಣೆಗಳಿವೆ. ತಮ್ಮ ದಿನೋಪಯೋಗಕ್ಕಾಗಿ ಅನೇಕ ಸಣ್ಣ ಪುಟ್ಟ ತಂತ್ರಜ್ಞಾನಗಳನ್ನು ಭಾರತೀಯರು ಕಂಡು ಹಿಡಿದಿದ್ದನ್ನು ನಾವು ಈಗಾಗಲೇ ನೋಡಿದ್ದೇವೆ. ಕಾಮನ್ ಮ್ಯಾನ್ ಕಂಡು ಹಿಡಿದ ಅನೇಕ ಜುಗಾಡ್ ಐಡಿಯಾಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಇರುವುದನ್ನು ನೀವು ನೋಡಿರಬಹುದು. ಐರನ್ ಬಾಕ್ಸ್‌ನಲ್ಲಿ ಚಪಾತಿ ಮಾಡುವುದು, ಮೀನು ಹಿಡಿಯಲು ಹೊಸ ಟ್ರಿಕ್ಸ್ ಮಾಡುವುದು, ಗ್ಯಾಸ್ ನಿಂದ ಇಸ್ತ್ರಿ ಹಾಕುವುದು ಸೇರಿದಂತೆ ಅನೇಕ ವೀಡಿಯೋಗಳನ್ನು ನೀವು ನೋಡಿರಬಹುದು.

ಇಲ್ಲಿ ವ್ಯಕ್ತಿಯೊಬ್ಬ ಮರದಿಂದ ಹಣ್ಣು ಕೊಯ್ಯಲು ಮಾಡಿದ ತಂತ್ರಜ್ಞಾನವೊಂದು ವೈರಲ್ ಆಗಿದ್ದು ಇದನ್ನು ಉದ್ಯಮಿ ಆನಂದ್ ಮಹೀಂದ್ರ ಕೂಡ ಮೆಚ್ಚಿಕೊಂಡಿದ್ದಾರೆ. ಆವಿಷ್ಕಾರದ ಹಲವು ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಪೋಸ್ಟ್ ಮಾಡುತ್ತಿದ್ದಾರೆ. ಅದೇ ರೀತಿ ಈಗ ಹಣ್ಣು ಕೊಯ್ಯಲು ವ್ಯಕ್ತಿಯೊಬ್ಬ ಮಾಡಿದ ತಂತ್ರಜ್ಞಾನವನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಕೊಂಡಾಡಿದ್ದಾರೆ.

ಈ ವೀಡಿಯೋದಲ್ಲಿ ಕಾಣಿಸುವಂತೆ ವ್ಯಕ್ತಿಯೋರ್ವ ಎತ್ತರದ ಮರದಿಂದ ಹಣ್ಣನ್ನು ಕೊಯ್ಯಲು ಹೊಸ ತಂತ್ರಜ್ಞಾನವನ್ನು ಕಂಡು ಹಿಡಿದಿದ್ದಾನೆ. ಒಂದು ಕೋಕಾ ಕೋಲ ಬಾಟಲಿಯನ್ನು ಅದರ ಕೆಳಭಾಗದಲ್ಲಿ ಹೂವಿನ ಎಸಳಿನಂತೆ ನಾಲ್ಕು ಭಾಗ ಮಾಡುತ್ತಾನೆ. ಅದರೊಳಗೆ ಬಟ್ಟೆ ಒಣ ಹಾಕಲು ಬಳಸುವ ಹಗ್ಗದಂತಿರುವ ಹಗ್ಗವನ್ನು ಹೆಣೆಯುವ ಆತ ಆ ಬಾಟಲಿಯ ಮುಚ್ಚಳದ ಭಾಗಕ್ಕೆ ಉದ್ದವಾದ ಪ್ಲಾಸ್ಟಿಕ್ ಪೈಪ್‌ಗಳನ್ನು ಕಟ್ಟುತ್ತಾನೆ. ಪೈಪಿನೊಳಗೆಯೋ ಆತ ಈ ಹಗ್ಗವನ್ನು ಹರಿ ಬಿಟ್ಟು ತುಂಬ ಗಟ್ಟಿಯಾಗಿ ಕಟ್ಟುತ್ತಾನೆ. ಈ ಪೈಪ್‌ನೊಳಗಿರುವ ಹಗ್ಗವನ್ನು ಎಳೆದರೆ ಮೇಲಿರುವ ಬಾಟಲಿ ಹೂವಿನಂತೆ ತೆರೆದುಕೊಳ್ಳುತ್ತದೆ. ಹೀಗಾಗಿ ಹಣ್ಣು ಕೊಯ್ಯಲು ಮರದ ಬಳಿ ಇದನ್ನು ಸಾಗಿಸುವ ಈತ ಮರದಲ್ಲಿರುವ ಹಣ್ಣಿನ ಸಮೀಪ ಬಂದು ಕೆಳಭಾಗದಿಂದ ಹಗ್ಗವನ್ನು ಎಳೆಯುತ್ತಾನೆ. ಇದರಿಂದ ಹಣ್ಣುಗಳು ಯಾವುದೇ ಗಾಯಗಳಾಗದೇ ಬಾಟಲಿಯೊಳಗೆ ಬೀಳುತ್ತದೆ. ಈ ಮೂಲಕ ನೆಲಕ್ಕೆ ಬೀಳದೇ ಯಾವುದೇ ಗಾಯವಾಗದೇ ಹಣ್ಣು ನಮ್ಮ ಕೈಗೆಟುಕುವುದು.

ನೀವು ಗಮನಿಸಿರಬಹುದು ಹಣ್ಣು ಕೊಯ್ಯುವಾಗ ಹಣ್ಣು ಸಾಕಷ್ಟು ಹಣ್ಣುಗಳು ನೆಲದ ಮೇಲೆ ಬಿದ್ದು ಗಾಯಗೊಂಡು ಹಾಳಾಗುವುದು. ಆದರೆ ಈತ ಪತ್ತೆ ಮಾಡಿದ ಈ ಹೊಸ ತಂತ್ರಜ್ಞಾನ ನೋಡುಗರಿಗೆ ಇಷ್ಟವಾಗಿದ್ದು, ಹಣ್ಣನ್ನು ಹಾನಿಯಾಗದಂತೆ ಕೊಯ್ಯುವುದಕ್ಕೆ ಒಂದು ಹೊಸ ಉಪಾಯವಾಗಿದೆ. ಇದನ್ನು ಆನಂದ್ ಮಹೀಂದ್ರಾ ಮೆಚ್ಚಿಕೊಂಡಿದ್ದು, ಇದೊಂದು ಸೃಜನಶೀಲತೆಯ ಆವಿಷ್ಕಾರವಾಗಿದೆ. ಅಮೆರಿಕಾದಲ್ಲಿ ಇಂತಹ ಸೃಜನಶೀಲತೆ ಹೆಚ್ಚಿರುವುದರಿಂದಲೇ ಆ ದೇಶ ಸೃಜನಶೀಲತೆಯ ಶಕ್ತಿ ಕೇಂದ್ರವಾಯಿತು ಎಂದು ಅವರು ಬರೆದುಕೊಂಡಿದ್ದಾರೆ.