Home Karnataka State Politics Updates ಚಡ್ಡಿ ಹೋಗಿ ಪ್ಯಾಂಟ್ ಬಂದಿರುವುದು ಸಿದ್ದರಾಯ್ಯಗೆ ಗೊತ್ತೆ ಇಲ್ಲ

ಚಡ್ಡಿ ಹೋಗಿ ಪ್ಯಾಂಟ್ ಬಂದಿರುವುದು ಸಿದ್ದರಾಯ್ಯಗೆ ಗೊತ್ತೆ ಇಲ್ಲ

Hindu neighbor gifts plot of land

Hindu neighbour gifts land to Muslim journalist

ಧಾರವಾಡ: ಪದೇ ಪದೇ ಆರ್.ಎಸ್.ಎಸ್. ಟೀಕಿಸುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ನವರಿಗೆ ಚಡ್ಡಿ ಹೋಗಿ ಪ್ಯಾಂಟ್ ಬಂದಿರುವ ವಿಷಯ ಗೊತ್ತೆ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ವೋಟ್ ಬ್ಯಾಂಕಿಗಾಗಿ ಕಾಂಗ್ರೆಸಿಗರು ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸಿಗರಿಗೆ ರಾಜಕೀಯವಾಗಿ ಮಾತನಾಡಲು ಏನೂ ಸಿಗದಿದ್ದಾಗ ಆರ್.ಎಸ್.ಎಸ್. ಬಗ್ಗೆ ಮಾತನಾಡುತ್ತಾರೆ. ಮಾತನಾಡಲು ಹಲವಾರು ವಿಷಯಗಳಿವೆ. ಅವುಗಳ ಬಗ್ಗೆ ಚರ್ಚಿಸಲಿ. ವಿಪಕ್ಷ ನಾಯಕ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಸಲಹೆಗಳನ್ನು ನೀಡಲಿ ಎಂದು ಹೇಳಿದರು.