Home Karnataka State Politics Updates 12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

Hindu neighbor gifts plot of land

Hindu neighbour gifts land to Muslim journalist

ಮುಂಬರುವ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ 12 ಸಚಿವರ ಸಿಡಿಗಳು ಹೊರಗೆ ಬರ್ತಾವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ,
ಬರುತ್ತೆ.. ಸಿಡಿ ಬರುತ್ತೆ.. ವಿಧಾನಸಭೆ ಚುನಾವಣೆಯಲ್ಲಿ ಸಿಡಿ ಹೊರ ಬರುತ್ತೆ. 17ರಿಂದ 18 ಸಿಡಿಗಳು ಇವೆ. ಎಂದು  ಲೇವಡಿ ಮಾಡಿದರು.

ಹಿಂದೆ ನಮ್ಮ ರಾಜ್ಯದ ಕೆಲ ಶಾಸಕರಿಗೆ 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು. ಸಿಡಿ ಇವೆ, ಅವರೆಲ್ಲಾ ಸ್ಟೇ ತೆಗೆದುಕೊಂಡಿದ್ದಾರೆ. ಸಭಾಪತಿಗಳಿಗೆ ಸಿಡಿಯಲ್ಲಿ ಏನಿದೆ ನೋಡಿ ಸರ್ ಅಂದಿದ್ದೆ. ಸ್ಟೇ ಕೊಟ್ರಲ್ಲ, ಜಡ್ಜ್ ಅವರಾದ್ರೂ ನೋಡಬೇಕಲ್ಲ… ಸದಾನಂದಗೌಡ್ರು ಸ್ಟೇ ತಗೊಂಡಿದಾರೆ ರಾಜ್ಯದ 12 ಮಂತ್ರಿಗಳು ಸ್ಟೇ ತಗೊಂಡಾರೆ… ಆದರೂ ವಿಧಾನಸೌಧದಲ್ಲಿ ಬಹಳ ಗೌರವಾನ್ವಿತರಂತೆ ಮಾತಾಡ್ತಾರೆ. ಛೇ… ಛೇ…’ ಎಂದು ವ್ಯಂಗ್ಯವಾಡಿದರು ಇಬ್ರಾಹಿಂ.