Home News ಬಕ್ರಿದ್ ಹಬ್ಬದ ಆಚರಣೆಗೆ ರಾಜ್ಯ ಸರ್ಕಾರದಿಂದ  ಮಾರ್ಗಸೂಚಿ ಪ್ರಕಟ

ಬಕ್ರಿದ್ ಹಬ್ಬದ ಆಚರಣೆಗೆ ರಾಜ್ಯ ಸರ್ಕಾರದಿಂದ  ಮಾರ್ಗಸೂಚಿ ಪ್ರಕಟ

Hindu neighbor gifts plot of land

Hindu neighbour gifts land to Muslim journalist

ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದಂತ ಬಕ್ರಿದ್ ಹಬ್ಬದ ಆಚರಣೆಗಾಗಿ ರಾಜ್ಯ ಸರ್ಕಾರದಿಂದ  ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. 

ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಮುಸ್ಲಿಂ ಬಾಂಧವರ ಎರಡನೇ ಪ್ರಮುಖ ಹಬ್ಬವಾದ ಬಕ್ರೀದ್ ( ಈದ್ – ಉಲ್-ಆಝ್ ಹಾ ) ಹಬ್ಬವನ್ನು ಜುಲೈ.10, 2022ರ ರವಿವಾರದಂದು ರಾಜ್ಯಾಧ್ಯಂತ ಆಚರಿಸಲಾಗುವುದೆಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿರುತ್ತದೆ ಎಂದಿದ್ದಾರೆ.

ಕೋವಿಡ್ ಸಂಖ್ಯೆಯ ಏರಿಕೆಯ ನಡುವೆಯೂ ಬಕ್ರೀದ್ ಹಬ್ಬವನ್ನು ಕೆಲ ನಿಯಮಗಳನ್ನು ಪಾಲಿಸಿಕೊಂಡು ಆಚರಿಸುವಂತೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಪವಿತ್ರ ಬಕ್ರೀದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದೊಂದಿಗೆ ಆಚರಣೆ ಮಾಡಬೇಕಾಗಿರುವುದರಿಂದ, ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ.
ಬಕ್ರೀದ್ ಹಬ್ಬದ ಆಚರಣೆಯ ಮಾರ್ಗಸೂಚಿ ಕ್ರಮಗಳು

• ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು

• ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯ 2020ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು ನೆರವೇರಿಸುವುದು

• ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿಸಿದೆ.

• ಜಿಲ್ಲಾಡಳಿತ, ಸ್ಥಳೀಯ ಆಡಳಿತ ಸಂಸ್ಥೆಗಳಿಂದ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸತಕ್ಕದ್ದು.

• ಖುರ್ಬಾನಿಯನ್ನು ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯವನ್ನು ಕಡ್ಡಾಯವಾಗಿ ಕಾಪಾಡಿಕೊಳ್ಳುವುದು.

• ಪ್ರಾಣಿ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು

• ಸಾಮಾನ್ಯ ಹಾಗೂ ಸ್ಥಳೀಯವಾಗಿ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

• ಬಕ್ರೀದ್ ಹಬ್ಬದ ಆಚರಣೆ ಕುರಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹೊರಡಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ಸೂಚಿಸಿದ್ದಾರೆ.