Home ಅಡುಗೆ-ಆಹಾರ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ ಉಚಿತವಾಗಿ ಆಹಾರ...

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯ

Hindu neighbor gifts plot of land

Hindu neighbour gifts land to Muslim journalist

ಧಾರವಾಡ : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಒಂದಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತಿದೆ.

ಜುಲೈ ತಿಂಗಳಲ್ಲಿ ಅಂತ್ಯೋದಯ ಪಡಿತರ ಚೀಟಿದಾರರಿಗೆ 15 ಕೆಜಿ ಅಕ್ಕಿ, 20 ಕೆಜಿ ಜೋಳ, ಬಿಪಿಎಲ್ ಕಾರ್ಡಿನ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 3 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳ ಉಚಿತವಾಗಿ ವಿತರಿಸಲಾಗುತ್ತದೆ.

ಗ್ರಾಹಕರು ಹಂಚಿಕೆಯಾಗಿರುವ ಪಡಿತರವನ್ನು ನಿಗದಿತ ಸರಿಯಾದ ಪ್ರಮಾಣದಲ್ಲಿ ಪಡೆಯಬೇಕಾಗಿದ್ದು, ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಆಹಾರ ಧಾನ್ಯ ನೀಡಿದರೆ ಜಿಲ್ಲಾಧಿಕಾರಿಗಳ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ. ಈ ದೂರವಾಣಿ ಸಂಖ್ಯೆಗೆ 0836-2444594 ಮಾಹಿತಿ ನೀಡಬಹುದಾಗಿದೆ.

ಧಾರವಾಡ ಪಡಿತರ ಪ್ರದೇಶ ಆಹಾರ ನಿರೀಕ್ಷಕರು-8088737170, ಧಾರವಾಡ ತಾಲ್ಲೂಕು-ಆಹಾರ ಶಿರಸ್ತೇದಾರರು-9845059245, ಆಹಾರ ನಿರೀಕ್ಷಕರು-8310109795, ಅಳ್ನಾವರ-9448221892, ಹುಬ್ಬಳ್ಳಿ ಪಡಿತರ ಪ್ರದೇಶ-ಸಹಾಯಕ ನಿರ್ದೇಶಕರು-9611123128, ಆಹಾರ ನಿರೀಕ್ಷಕರು-8310490713, ಆಹಾರ ನಿರೀಕ್ಷಕರು-9886320360, ಹುಬ್ಬಳ್ಳಿ ತಾಲ್ಲೂಕು ಆಹಾರ ಶಿರಸ್ತೇದಾರರು-9035074105, ಆಹಾರ ನಿರೀಕ್ಷಕರು-9482532326, ಕಲಘಟಗಿ ತಾಲ್ಲೂಕು ಆಹಾರ ನಿರೀಕ್ಷಕರು-ಮೊ.ಸಂ.-9741304522, ಕುಂದಗೋಳ ತಾಲ್ಲೂಕು ಆಹಾರ ನಿರೀಕ್ಷಕರು-8618525185, ನವಲಗುಂದ ತಾಲ್ಲೂಕು-ಆಹಾರ ನಿರೀಕ್ಷಕರು-9902142458 ಮಾಹಿತಿ ನೀಡಿದರೆ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಸುಧೀರ್ ಸಾವ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.