Home latest ಉಡುಪಿ : ಆಟವಾಡುತ್ತಿದ್ದ 5 ವರ್ಷದ ಬಾಲಕ ನೀರಿಗೆ ಬಿದ್ದು ದಾರುಣ ಸಾವು!

ಉಡುಪಿ : ಆಟವಾಡುತ್ತಿದ್ದ 5 ವರ್ಷದ ಬಾಲಕ ನೀರಿಗೆ ಬಿದ್ದು ದಾರುಣ ಸಾವು!

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಆಟವಾಡುತ್ತಿದ್ದ 5 ವರ್ಷದ ಮಗುವೊಂದು ನೀರಿನ ಹೊಂಡಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆಯೊಂದು ಬ್ರಹ್ಮಾವರ ತಾಲೂಕಿನ ಉಪ್ಪರು ತೆಂಕಬೆಟ್ಟುವಿನಲ್ಲಿ ನಡೆದಿದೆ.

ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ.

ಮನೆ ಸಮೀಪ ಆಟವಾಡುತ್ತಿದ್ದ ಮಗು ಅಚಾನಕ್ ನಾಪತ್ತೆಯಾಗಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮನೆ ಸಮೀಪದ ನೀರಿನ ಹೊಂಡದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಆಟ ಆಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ನಾರ್ಮನ್ ಅವರ ಕುಟುಂಬ ಇತ್ತೀಚೆಗೆ ಕುವೈತ್ ನಿಂದ ರಜೆ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿತ್ತು. ಈ ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ