Home latest ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿದ ದುಷ್ಕರ್ಮಿಗಳು !!!

ಮಹಾತ್ಮಾ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿದ ದುಷ್ಕರ್ಮಿಗಳು !!!

Hindu neighbor gifts plot of land

Hindu neighbour gifts land to Muslim journalist

ಇತ್ತೀಚೆಗಷ್ಟೇ ಕೆನಡಾದ ಒಂಟಾರಿಯೊದ ರಿಚಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯ ಮೇಲೆ ದುಷ್ಕರ್ಮಿಗಳು ಕೆಟ್ಟದಾಗಿ ಬರೆದು, ವಿಷ್ಣು ದೇವಾಲಯದ ಕೆಲವು ಪ್ರತಿಮೆಗಳನ್ನು ವಿರೂಪಗೊಳಿಸಿದ್ದರು. ಈಗ ಅಂಥದ್ದೇ ಮತ್ತೊಂದು ಪ್ರಕರಣ ಪಂಜಾಬ್ ನಲ್ಲಿ ಬಯಲಿಗೆ ಬಂದಿದೆ.

ಪಂಜಾಬ್ ನ ಬಟಿಂಡಾದ ಎಂಬ ಸಾರ್ವಜನಿಕ ಉದ್ಯಾನವನದಲ್ಲಿ ಯಾರೋ ಅಪರಿಚಿತ ದುಷ್ಕರ್ಮಿಗಳು ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ.

ರಮ್ಮನ್ ಮಂಡಿಯ ಸಾರ್ವಜನಿಕ ಉದ್ಯಾನವನದಲ್ಲಿ ಗಾಂಧೀಜಿ ಪ್ರತಿಮೆಯಿತ್ತು. ಈ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು ಮಾತ್ರವಲ್ಲದೇ, ದುಷ್ಕರ್ಮಿಗಳು ಅದರ ಮುಖವನ್ನು ಕೂಡಾ ತೆಗೆದುಕೊಂಡು ಹೋಗಿದ್ದಾರೆ.

ಈ ಪ್ರಕರಣ ಪಂಜಾಬ್ ನ ರಾಮ್ಮನ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಟೇಷನ್ ಹೌಸ್ ಆಫೀಸರ್ (ಸದರ್) ಹರ್ಜೋತ್ ಸಿಂಗ್ ಮಾನ್ ಇದರ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದು, ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಧ್ವಂಸಕ ಕೃತ್ಯವನ್ನು ಸ್ಥಳೀಯ ಜನರು ತೀವ್ರವಾಗಿ ವಿರೋಧಿಸಿ ಅದನ್ನು ಖಂಡಿಸಿದ್ದಾರೆ ಎಂದು ಹೇಳಲಾಗಿದೆ. ಜಿಲ್ಲಾ ನಗರ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಸಿಂಗ್ಲಾ,ಅವರು ಅಪರಾಧದ ಹಿಂದಿರುವವರನ್ನು ಈ ಕೃತ್ಯ ಎಸಗಿದವರನ್ನು ತಕ್ಷಣ ಬಂಧಿಸಬೇಕೆಂದು ಪೊಲೀಸ್ ಗೆ ಹೇಳಿದ್ದಾರೆ.