ಕಾರ್ಕಳ : ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಗಿಟ್ಟಿಸಿದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ

Share the Article

ಕಾರ್ಕಳ : ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಗಿಟ್ಟಿಸಿಕೊಂಡಿದ್ದ ಯುವತಿಯೋರ್ವಳು ಭಾನುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ.

ಕಾರ್ಕಳ ತಾಲೂಕಿನ ಕಚೇರಿ ಸಿಬ್ಬಂದಿ ಸುಶ್ಮಿತಾ (24) ಎಂಬವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಡ್ಕೊ ಕಾಲನಿ ನಿವಾಸಿಯಾಗಿದ್ದ ಸುಶ್ಮಿತಾ ಅವರು ನಿನ್ನೆ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಗಳಿಸಿದ ಈಕೆ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಶಾಲಾ ಕಾಲೇಜಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಪ್ರತಿಭೆ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದರು.

Leave A Reply