Home Social ಇಂದು ಆಷಾಢ ಅಮಾವಾಸ್ಯೆ ಎಲ್ಲೆಲ್ಲಿ ಹೇಗೆ ಆಚರಿಸಲಾಗುತ್ತದೆ

ಇಂದು ಆಷಾಢ ಅಮಾವಾಸ್ಯೆ ಎಲ್ಲೆಲ್ಲಿ ಹೇಗೆ ಆಚರಿಸಲಾಗುತ್ತದೆ

Hindu neighbor gifts plot of land

Hindu neighbour gifts land to Muslim journalist

ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.

ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.

ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ನಂಬಿಕೆಯ ಪ್ರಕಾರ, ಆಷಾಢ ಅಮವಾಸ್ಯೆಯಂದು ಕೃಷಿ ಉಪಕರಣಗಳನ್ನು ಪೂಜಿಸಲಾಗುತ್ತದೆ. ಮಳೆಗಾಲದ ಆರಂಭವಾಗಿರುವುದರಿಂದ ಈ ರೀತಿ ಮಾಡುವುದರಿಂದ ಹಣ್ಣುಗಳು ಮತ್ತು ಧಾನ್ಯಗಳ ಉತ್ಪಾದನೆ ಉತ್ತಮವಾಗಿರುತ್ತದೆ, ಇದರಿಂದ ಮನೆಯ ಸಂಪತ್ತು  ಹೆಚ್ಚಾಗುತ್ತದೆ.