Home latest ಮಂಗಳೂರು : ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ !!

ಮಂಗಳೂರು : ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ !!

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಮತ್ತೆ ಮಂಗಳೂರಿನಲ್ಲಿ ಮಚ್ಚು ಝಳಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ : ಆಗಸ್ಟ್ 19ರ ಸಂಜೆ ವೇಳೆಗೆ 16ವರ್ಷದ ಬಾಲಕನೋರ್ವ ಸಾಮಾನು ತರಲೆಂದು ಅಂಗಡಿಗೆ ಬಂದಿದ್ದು, ಈ ವೇಳೆ ದಾರಿಯಲ್ಲಿ ಸಿಕ್ಕ ತಂಡವೊಂದು ಆತನನ್ನು ತಡೆದು ಹಲ್ಲೆಗೆ ಮುಂದಾಗಿದೆ. ಈ ಸಂದರ್ಭ ಆತನ ಮಾವ ಅದೇ ದಾರಿಯಲ್ಲಿ ಬಂದಿದ್ದು, ತಡೆಯಲು ಮುಂದಾದಾಗ ತಂಡವು ಬಾಲಕನ ಮಾವನ ಮೇಲೆಯೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಎನ್ನಲಾಗಿದೆ.

ಸದ್ಯ ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿ ನಡೆಸಿದ ತಂಡದಲ್ಲಿದ್ದ ಇಬ್ಬರ ವಿರುದ್ಧ ಈಗಾಗಲೇ ಜಿಲ್ಲೆಯ ಹಲವು ಠಾಣೆಗಳಲ್ಲಿ ಪ್ರಕರಣಗಳಿದ್ದು, ಕೆಲವು ಬಾರಿ ಜೈಲೂಟ ಸವಿದರೂ ಮತ್ತದೇ ಚಾಳಿ ಮುಂದುವರಿಸಿದ್ದಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.