Home ದಕ್ಷಿಣ ಕನ್ನಡ ಪುಂಜಾಲಕಟ್ಟೆ: ಬೆಳ್ಳಂಬೆಳಗ್ಗೆ ಬೈಕುಗಳ ಮಧ್ಯೆ ಅಪಘಾತ!! ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು!!

ಪುಂಜಾಲಕಟ್ಟೆ: ಬೆಳ್ಳಂಬೆಳಗ್ಗೆ ಬೈಕುಗಳ ಮಧ್ಯೆ ಅಪಘಾತ!! ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು!!

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ:ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಬಳಿಯಲ್ಲಿ ನಡೆದಿದೆ.

ಮೃತನನ್ನು ಉಪ್ಪಿನಂಗಡಿಯ ಕರಾಯ ನಿವಾಸಿ ಮೊಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ.ಪುಂಜಾಲಕಟ್ಟೆಯ ಅಂಚೆ ಕಚೇರಿಯ ಬಳಿಯಲ್ಲಿ ಘಟನೆ ಸಂಭವಿಸಿದ್ದು,ಶಫೀಕ್ ತನ್ನ ಬೈಕಿನಲ್ಲಿ ಮಂಗಳೂರಿನ ಕಾಲೇಜಿಗೆ ಹೊರಟಿದ್ದರು ಎನ್ನಲಾಗಿದೆ.

ಈ ವೇಳೆ ಪುಂಜಾಲಕಟ್ಟೆಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಬೈಕ್ ಒಂದರ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಶಫೀಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪುಂಜಾಲಕಟ್ಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.