Home Karnataka State Politics Updates ಕೇಸರಿ ಕಲರವಕ್ಕೆ ಕರ್ನಾಟಕ ಸಜ್ಜು | ರಾಜ್ಯಕ್ಕೆ ಇಂದು ಯೋಗಿ ಆದಿತ್ಯನಾಥ್, ನಾಳೆ ಪ್ರಧಾನಿ ಮೋದಿ...

ಕೇಸರಿ ಕಲರವಕ್ಕೆ ಕರ್ನಾಟಕ ಸಜ್ಜು | ರಾಜ್ಯಕ್ಕೆ ಇಂದು ಯೋಗಿ ಆದಿತ್ಯನಾಥ್, ನಾಳೆ ಪ್ರಧಾನಿ ಮೋದಿ ಭೇಟಿ !

Hindu neighbor gifts plot of land

Hindu neighbour gifts land to Muslim journalist

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಇಂದು ನೆಲಮಂಗಲಕ್ಕೆ ಭೇಟಿ ನೀಡಲಿದ್ದರೆ, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಂದ ನಿರ್ಮಿತವಾಗಿರುವ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರದ ಕ್ಷೇಮಾವನವನ್ನು ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ. ಯೋಗಿ ಆಗಮನ ಹಿನ್ನೆಲೆ ನಗರದ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮಳೆ ಸಮಸ್ಯೆಯಾದರೆ ಬೆಂಗಳೂರಿನಿಂದ ಮಹದೇವಪುರಕ್ಕೆ ಯೋಗಿ ಕಾರಿನಲ್ಲಿ ಪ್ರಯಾಣ ಮಾಡಲಿದ್ದಾರೆ. ಈಗಾಗಲೇ ನೆಲಮಂಗಲದ ಬಾವಿಕೆರೆ ಬಳಿ ಎರಡು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಯೋಗಿ ಭದ್ರತೆಗಾಗಿ 1 ಎಸ್‍ಪಿ, 1 ಎಎಸ್‍ಪಿ, 6 ಡಿವೈಎಸ್‍ಪಿ, 20 ಸಿಪಿಐ, 50 ಪಿಎಸ್‍ಐ, 600 ಪೊಲೀಸ್ ಸಿಬ್ಬಂದಿ, 1 ಕೆಎಸ್‍ಆರ್‌ಪಿ ತುಕಡಿ, ಹಾಗೂ 2 ಡಿಎಆರ್ ತುಕಡಿ ನಿಯೋಜಿಸಿ ಭದ್ರಕೋಟೆ ನಿರ್ಮಿಸಲಾಗಿದೆ.

ಇನ್ನೊಂದೆಡೆ ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಅವರು ಕೇಸರಿ ಭದ್ರ ಕೋಟೆ ಮಂಗಳೂರು ನಗರ ಹೊರವಲಯದಲ್ಲಿರುವ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಮೋದಿ ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದ್ದು, 25 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಅಳವಡಿಸಲಾಗುತ್ತಿದೆ. ನಾಳೆ ಮಧ್ಯಾಹ್ನ 12.55 ಕ್ಕೆ ವಿಶೇಷ ವಿಮಾನದ ಮೂಲಕ ಕೊಚ್ಚಿಯಿಂದ ಮಂಗಳೂರು ಏರ್‌ಪೋರ್ಟ್‌ಗೆ ಮೋದಿ ಬಂದಿಳಿಯಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎನ್.ಎಂ.ಪಿ.ಎ ಹೆಲಿಪ್ಯಾಡ್‍ಗೆ ಬಂದು ಬಳಿಕ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಬಳಿಕ 40 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪ್ರಧಾನಿಯೊಬ್ಬರು ಮಂಗಳೂರಿನಲ್ಲಿ ನಡೆಯುತ್ತಿರುವ ಸರ್ಕಾರಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಎನ್‍ಎಂಪಿಟಿ, ಎಂಆರ್‌ಪಿಎಲ್, ರಾಜ್ಯ ಮೀನುಗಾರಿಕೆ ಇಲಾಖೆಯ ಯೋಜನೆಯ ಶಿಲಾನ್ಯಾಸ, ಲೋಕಾರ್ಪಣೆಯನ್ನು ಪ್ರಧಾನಿ ಮಾಡಲಿದ್ದಾರೆ. ಈ ಎಸ್.ಪಿ.ಜಿ ಅಧಿಕಾರಿಗಳು ಮೂರು ದಿನಗಳಿಂದ ಮಂಗಳೂರಿನಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಮಾವೇಶಕ್ಕೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಕಾರ್ಯಕರ್ತರನ್ನು ಕರೆತರಲು 1461 ಬಸ್, 200 ಟಿಟಿ ಬುಕ್ಕಿಂಗ್ ಮಾಡಲಾಗಿದೆ ಎಂಬ ಮಾಹಿತಿ ಇದೆ.