Home ದಕ್ಷಿಣ ಕನ್ನಡ ಸಾಲ್ಮರ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನಿತಿನ್ ಮೃತ್ಯು

ಸಾಲ್ಮರ : ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನಿತಿನ್ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೈಕ್‌ ಸವಾರ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ ಕೆಲಸ ಮಾಡುತ್ತಿದ್ದ ನಿತಿನ್ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸೆ.29 ರಂದು ಗಸ್ತು ನಿರತ ಪೊಲೀಸರು ಸಾಲ್ಮರದಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಅಪಘಾತಗೊಂಡ ಸ್ಥಿತಿಯಲ್ಲಿ ನಿತಿನ್ ಬಿದಿದ್ದು ತೀವ್ರ ಗಾಯಗೊಂಡಿದ್ದರು. ಪೊಲೀಸರು ನಿತಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ತೀವ್ರ ಗಾಯಗೊಂಡ ನಿತಿನ್ ಅವರನ್ನು ಪುತ್ತೂರು ಅಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಅ.5 ರ ನಸುಕಿನ ಜಾವ ಮೃತಪಟ್ಟಿದ್ದಾರೆ .