Home ದಕ್ಷಿಣ ಕನ್ನಡ ಬಂಟ್ವಾಳ : ಪೆಟ್ರೋಲ್ ಸುರಿದು ಯುವಕ ಕೊಲೆ | ಗಾಳಿ ಸುದ್ದಿ ಬೆಂಬತ್ತಿದ್ದ ಪೊಲೀಸರಿಂದ ಕೊಲೆ...

ಬಂಟ್ವಾಳ : ಪೆಟ್ರೋಲ್ ಸುರಿದು ಯುವಕ ಕೊಲೆ | ಗಾಳಿ ಸುದ್ದಿ ಬೆಂಬತ್ತಿದ್ದ ಪೊಲೀಸರಿಂದ ಕೊಲೆ ಪ್ರಕರಣ ಬೆಳಕಿಗೆ

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ನಡೆಸಿದ್ದೇನೆ ಎಂದು ವ್ಯಕ್ತಿಯೊಬ್ಬ ಹೇಳಿಕೆ ನೀಡಿದ್ದು, ವಿಚಾರ ಸುದ್ದಿಯಾಗುತ್ತಿದ್ದಂತೆ ಪ್ರಕರಣದ ಬೆನ್ನು ಹತ್ತಿದ ಪೊಲೀಸರ ತಂಡ ಸುದ್ದಿ ಹಬ್ಬಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ.

ರವಿವಾರ ರಾತ್ರಿವೇಳೆಗೆ ಸಮಾದ್ ಎಂಬ 19 ವರ್ಷದ ಯುವಕನನ್ನು ಕಿಡ್ನಾಪ್ ನಡೆಸಿದ್ದು, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ನಡೆಸಲಾಗಿದೆ ಎನ್ನುವ ಸುದ್ದಿಯೊಂದು ಸೋಮವಾರ ಮುಂಜಾನೆಯಿಂದಲೇ ಎಲ್ಲೆಡೆ ಹಬ್ಬಿದ್ದು, ಪೊಲೀಸ ಠಾಣೆಯ ಮೆಟ್ಟಿಲೇರಿತ್ತು. ಮೊದಲಿಗೆ ವದಂತಿ ಎಂದು ಅನುಮಾನಿಸಲಾಗಿದ್ದು,ಪೊಲೀಸರು ವದಂತಿಯ ಬೆನ್ನು ಹತ್ತಿ ತನಿಖೆ ನಡೆಸಿದ್ದರು.

ಈ ವೇಳೆ ವದಂತಿ ಹಬ್ಬಿಸಿದ್ದಾನೆ ಎನ್ನಲಾದ ವ್ಯಕ್ತಿ ಬೋಳಂತೂರು ನಿವಾಸಿ ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಅದ್ರಾಮ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ತನಿಖೆ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.