HomeBreaking Entertainment News Kannadaಕಾಂತಾರ ನಟಿ ಸಪ್ತಮಿ ಅಭಿಷೇಕ್ ಅಂಬರೀಶ್ ಗೆ ನಾಯಕಿ | ಸಿನಿಮಾ ಯಾವುದು ? ಇಲ್ಲಿದೆ...

ಕಾಂತಾರ ನಟಿ ಸಪ್ತಮಿ ಅಭಿಷೇಕ್ ಅಂಬರೀಶ್ ಗೆ ನಾಯಕಿ | ಸಿನಿಮಾ ಯಾವುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!!!

Hindu neighbor gifts plot of land

Hindu neighbour gifts land to Muslim journalist

‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನು ಬರೆದಿದೆ. ಈ ಸಿನಿಮಾದ ನಾಯಕಿಯಾದ ಸಪ್ತಮಿ ಗೌಡ ಅವರಿಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹರಿದು ಬರುತ್ತಿವೆ. ಆದರೆ ಇದೀಗ ಅವರು ಕನ್ನಡದ ಮತ್ತೊಂದು ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ. ಈ ಬಗ್ಗೆ ಮಾತುಕತೆ ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಸಿನಿಮಾ ಯಾವುದು? ಎಂಬ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಪೈಲ್ವಾನ್ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ , ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರಿಗೆ ಸಿನಿಮಾವೊಂದಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕೆ ‘ಕಾಳಿ’ ಎಂದು ಹೆಸರಿಡಲಾಗಿದೆ. ಸಿನಿಮಾದ ಟೈಟಲ್ ಸೇರಿದಂತೆ ಹಲವಾರು ವಿಚಾರಗಳನ್ನೂ ನಿರ್ದೇಶಕ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ಇನ್ನೂ, ಈ ಸಿನಿಮಾಗೆ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರನ್ನು ನಟಿಸಲು ಕೇಳಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಸಪ್ತಮಿ ಗೌಡ ಅವರನ್ನು ನಿರ್ದೇಶಕ ಕೃಷ್ಣ ಭೇಟಿಯಾಗಿ ಸಿನಿಮಾದ ಕಥೆ ಮತ್ತು ಪಾತ್ರದ ಹಿನ್ನೆಲೆಯನ್ನು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಈ ಚಿತ್ರದ ನಾಯಕಿ ಸಪ್ತಮಿ ಗೌಡ ಅವರೇ ಎನ್ನುತ್ತಿದೆ ಗಾಂಧಿ ನಗರ ಮೂಲಗಳು. ಆದರೆ ಈ ಬಗ್ಗೆ ಕೃಷ್ಣ ಅವರು ಆಗಲಿ ಅಥವಾ ಸಪ್ತಮಿ ಗೌಡ ಆಗಲಿ ಯಾವುದೇ ರೀತಿಯ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೂ , ಈ ‘ಕಾಳಿ’ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿಯ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾದಲ್ಲಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಷ್ಟಲ್ಲದೆ, ರೆಬಲ್ ಸ್ಟಾರ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅವರ ಫಸ್ಟ್ ಲುಕ್ ರಿಲೀಸ್ ಆಗಿರುವುದರಿಂದ ತಿಳಿದುಬಂದಿದೆ. ಇದೀಗ ಅಭಿಷೇಕ್ ಅವರು ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಕಾಣಿಸಿಕೊಳ್ಳಲಿದ್ದಾರೆ.

RELATED ARTICLES

Most Popular

Recent Comments