ಗಮನಿಸಿ : 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲ ಸ್ಕಾಲರ್‌ಶಿಪ್-ಕೇಂದ್ರ ಸರ್ಕಾರದಿಂದ ಆದೇಶ

ಶಿಕ್ಷಣ ಇಲಾಖೆ ಮಂಡಳಿಯ ಪರವಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಒಂದನ್ನು ಜಾರಿ ಮಾಡಲಾಗಿದೆ. ಹೌದು ಕೇಂದ್ರ ಸರ್ಕಾರವು 2022-23ನೇ ಸಾಲಿನಿಂದ 1 ರಿಂದ 8ನೇ ತರಗತಿ ವರೆಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಲಿದೆ.

ಈ ಮೇಲಿನ ಆದೇಶ ಕುರಿತು ಸ್ಪಷ್ಟನೆಯನ್ನು ಶಿಕ್ಷಣ ಮಂಡಳಿ ನೀಡಿದೆ. ಅದಲ್ಲದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ವರ್ಗಗಳ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದೆ.

ಪ್ರಸ್ತುತ ಶಿಕ್ಷಣ ಹಕ್ಕು ಕಾಯ್ದೆಯಡಿ 8 ನೇ ತರಗತಿಯವರೆಗೆ ಮಾತ್ರವೇ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ದೊರೆಯಲಿದೆ ಎಂದು ಪ್ರತಿಪಾದಿಸಿದೆ. ಇದಕ್ಕೂ ಮೊದಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದ ಸೌಲಭ್ಯ ಅಲ್ಪಸಂಖ್ಯಾತ ಸಮುದಾಯದ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೂ ದೊರೆಯುತ್ತಿತ್ತು.
ಇನ್ನು ಮುಂದೆ 9 ಮತ್ತು 10ನೇ ತರಗತಿಗಳು ಪ್ರೌಢ ಶಾಲೆಗಳಲ್ಲ ಎಂದು ಶಿಕ್ಷಣ ಇಲಾಖೆ ಮಂಡಳಿಯಿಂದ ಆದೇಶ ನೀಡಿದೆ.

ಶಿಕ್ಷಣ ಹಕ್ಕು ಕಾಯ್ದೆ 2009ರ ಅನ್ವಯ ಪ್ರತಿ ಮಗುವಿಗೂ 1 ರಿಂದ 8ನೇ ತರಗತಿವರೆಗೂ ಮಾತ್ರ ಉಚಿತ ಶಿಕ್ಷಣ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣ ನೀಡಬೇಕಾಗಿದೆ ಎಂದಿದೆ. ಅದರಂತೆ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಅನುಕೂಲ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ದೊರೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳ ಅರ್ಜಿಗಳನ್ನು ಮಾತ್ರ ಪರಿಶೀಲಿಸಬೇಕು ಎಂದು ರಾಜ್ಯ, ಜಿಲ್ಲಾ ನೋಡಲ್ ಅಧಿಕಾರಿಗಳಿಗೂ ಇಲಾಖೆ ಸೂಚಿಸಿದೆ. ಆದರೆ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಸರ್ಕಾರ ತನ್ನ ಆದೇಶವನ್ನು ಇನ್ನು ಮುಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಾತ್ರವೇ ಪೂರ್ಣ ಪ್ರಮಾಣದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಹರಾಗಿರುತ್ತಾರೆ. ಈ ಮೇಲಿನ ಕುರಿತು ಹೇಳಿಕೆ ನೀಡಿರುವ ಕೇಂದ್ರ ಸರ್ಕಾರವು ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

Leave A Reply

Your email address will not be published.