ಕಾರ್ಕಳ : ಖಾಸಗಿ ಬಸ್ ಹಾಗೂ ಕಾರು ಭೀಕರ ಅಪಘಾತ | ಒಂದೇ ಕುಟುಂಬದ ಮೂವರ ದಾರುಣ ಸಾವು!!!

ಭೀಕರ ಅಪಘಾತವೊಂದು ಸಂಭವಿಸಿ ಮೂವರು ಸ್ಥಳದಲ್ಲಿಯೇ ಮರಣ ಹೊಂದಿರುವ ಹ್ರದಯ ವಿದ್ರಾವಕವಾದ ಘಟನೆ ನಡೆದಿದೆ .

ಶನಿವಾರ ಡಿ. 10ರಂದು ಕಾರ್ಕಳದ ಉಡುಪಿ- ಸುಬ್ರಹ್ಮಣ್ಯ ರಾಜ್ಯದ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾ ಮುಖಿ ಢಿಕ್ಕಿ ಸಂಭವಿಸಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿ ಆಗಿದೆ.

ಪ್ರಸ್ತುತ ಶನಿವಾರ ಬೆಳಗ್ಗೆ 7 ಗಂಟೆಗೆ ಅಪಘಾತ ಸಂಭವಿಸಿದ್ದು ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ.

ಸದ್ಯ ಅಪಘಾತ ನಡೆದ ಸ್ಥಳದಲ್ಲಿ ಪೊಲೀಸ್ ತನಿಖೆ ನಡೆಯುತ್ತಿದ್ದು ಈ ಬಗೆಗಿನ ಹೆಚ್ಚಿನ ಮಾಹಿತಿ ವಿಚಾರಣೆ ನಂತರ ತಿಳಿದು ಬರಬೇಕಿದೆ.

Leave A Reply

Your email address will not be published.