ಮಂಗಳೂರು: ಫಾಝಿಲ್ ಹತ್ಯೆ ಬೆನ್ನಲ್ಲೇ ಮತ್ತೊರ್ವನಿಗೆ ಚೂರಿ ಇರಿತ-ಗಂಭೀರ!!

ಮಂಗಳೂರು: ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕಾಟಿಪಳ್ಳ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿದ್ದು,ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಳು ಯುವಕನನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು,ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಕಳೆದ ಕೆಲ ತಿಂಗಳುಗಳ ಹಿಂದೆ ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನೊಬ್ಬನನ್ನು ಸಂಜೆ ವೇಳೆಗೆ ಅಂಗಡಿಯೊಂದರ ಮುಂಭಾಗದಲ್ಲೇ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡವು ಹತ್ಯೆ ಮಾಡಿತ್ತು. ಇಂದು ಅದೇ ರೀತಿಯಲ್ಲಿ ಜಲೀಲ್ ಗೂ ಚೂರಿ ಇರಿತವಾಗಿದ್ದು, ಅಂಗಡಿಯೊಂದರ ಮುಂಭಾಗದಲ್ಲೇ ಕೃತ್ಯ ನಡೆದಿದೆ.

ಸದ್ಯ ಘಟನೆಯಿಂದ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬಂದ ಅಪ್ಡೇಟ್ ಕೆಳಗೆ ಓದಿ :

ಮಂಗಳೂರು: ಇದೀಗ ಸಂಜೆ ಚೂರಿ ಇಳಿತಕ್ಕೆ ಒಳಗಾದ ಹುಡುಗ ಮೃತಪಟ್ಟಿದ್ದಾರೆ. ಕಳೆದ ಕೆಲ ತಿಂಗಳುಗಳ ಹಿಂದೆ ನಡೆದ ಸರಣಿ ಹತ್ಯೆಯ ಬಳಿಕ ಶಾಂತವಾಗಿದ್ದ ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದೆ. ಫಾಝಿಲ್ ಹತ್ಯೆ ನಡೆದ ಸುರತ್ಕಲ್ ಸಮೀಪದ ಕಾಟಿಪಳ್ಳ ನೈತಂಗಡಿ ಪ್ರದೇಶದಲ್ಲಿ ಯುವಕನೊಬ್ಬನಿಗೆ ಚೂರಿ ಇರಿತವಾಗಿತ್ತು.

ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಳು ಯುವಕನನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ದಾಳಿ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಚೂರಿ ಇರಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಘಟನೆಯಿಂದ ಗಾಯಗೊಂಡ ಯುವಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆಸ್ಪತ್ರೆಯಲ್ಲಿ ಕೊನೆಯುಸಿರಿಳೆದಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಆಸ್ಪತ್ರೆಗೆ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave A Reply

Your email address will not be published.