ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿಯವರಿಂದ ಹೊಸ ರಾಜಕೀಯ ಪಕ್ಷ ಘೋಷಣೆ

ಮಾಜಿ ಸಚಿವ, ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷದ ಹೆಸರಿಟ್ಟಿದ್ದಾರೆ. ಹೌದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದಂದು ಹೊಸ ರಾಜಕೀಯ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ಸಾರಿಗೆ ಸಚಿವ ಬಿ. ಶ್ರೀರಾಮುಲು ತಮ್ಮ ಆತ್ಮೀಯ ಸ್ನೇಹಿತ ಎಂದು ಬಣ್ಣಿಸುತ್ತಾ, ಭಾನುವಾರ ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜನಾರ್ದನ ರೆಡ್ಡಿ, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ರಾಜಕೀಯ ಪಕ್ಷ ಘೋಷಣೆ ಮಾಡಿದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಹೊಸ ರಾಜಕೀಯ ಪಕ್ಷ ಘೋಷಣೆಯಾಗಿದೆ.

Leave A Reply

Your email address will not be published.