ಮಂಗಳೂರು : ವಿದ್ಯಾರ್ಥಿನಿ ಆತ್ಮಹತ್ಯೆ | ಕಾರಣ ಇಲ್ಲಿದೆ

ಮಂಗಳೂರು : ಪರೀಕ್ಷೆಯಲ್ಲಿ ತಾನು ನಿರೀಕ್ಷಿಸಿದಷ್ಟು ಅಂಕ ದೊರೆತಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಮಂಗಳೂರಿನ ಕುದ್ರೋಳಿಯಲ್ಲಿ ನಡೆದಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಖತೀಜಾ ರೀನ್ ( 16) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಕಾಲೇಜಿಗೆ ತಾಯಿ ಭೇಟಿ ನೀಡಿದ್ದಂತ ಸಂದರ್ಭದಲ್ಲಿ ತಾನು ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗುವುದಾಗಿ ಹೇಳಿದ್ದಳು. ಆದರೆ ಪರೀಕ್ಷೆಯ ಫಲಿತಾಂಶವು, ಆಕೆ ನಿರೀಕ್ಷಿಸಿದಷ್ಟು ಬಂದಿರಲಿಲ್ಲ ಎಂಬ ಕಾರಣದಿಂದ ಮಾನಸಿಕವಾಗಿ ನೊಂದಿದ್ದಂತಹ ವಿದ್ಯಾರ್ಥಿನಿ ಈ ಕೊರಗಿನಲ್ಲಿ, ತನ್ನ ತಂದೆ-ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ತಂದೆ ತಾಯಿರ ಆಕ್ರಂದನ ಮುಗಿಲು ಮುಟ್ಟಿದೆ.

Leave A Reply

Your email address will not be published.