ಚೈನ್‌ಲಿಂಕ್ ವ್ಯವಹಾರದಲ್ಲಿ ತೊಡಗಿಕೊಂಡ ಶಿಕ್ಷಕರು | 8 ಮಂದಿ ಶಿಕ್ಷಕರ ಅಮಾನತು ಮಾಡಿದ ಡಿ.ಡಿ.ಪಿ.ಐ

ಬೆಂಗಳೂರು : ಚೈನ್‌ ಲಿಂಕ್‌ ವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಜಿಲ್ಲೆಯ ಎಂಟು ಮಂದಿ ಸರಕಾರಿ ಶಾಲಾ ಶಿಕ್ಷಕರನ್ನು ಚಿತ್ರದುರ್ಗ ಡಿಡಿಪಿಐ ಕೆ. ರವಿಶಂಕರ್‌ ರೆಡ್ಡಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 500 ಶಿಕ್ಷಕರು ಈ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೊಳಲ್ಕೆರೆಯ ಕೆ. ಮಲ್ಲಿಕಾರ್ಜುನ್‌ ಅವರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಜರಗಿಸಿದೆ. ಇಲಾಖೆ ಆಯುಕ್ತರ ಸೂಚನೆಯಂತೆ 16 ಶಿಕ್ಷಕರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಫೆ.1ರಂದು ಚಿತ್ರದುರ್ಗದ ಡಯಟ್‌ನಲ್ಲಿ ಈ ಶಿಕ್ಷಕರ ಜಂಟಿ ವಿಚಾರಣೆ ನಡೆಸಲಾಯಿತು. ಎಂಟು ಶಿಕ್ಷಕರು ಖಾಸಗಿ ವ್ಯವಹಾರದಲ್ಲಿ ಪಾಲ್ಗೊಂಡಿರುವುದು ವಿಚಾರಣೆ ವೇಳೆ ಸಾಬೀತಾಗಿತ್ತು.

ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

Leave A Reply

Your email address will not be published.