ಯುವತಿಯ ಮೊಬೈಲ್ ಪೋನ್ ಕರೆಗಳ ವಿವರ ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಪೊಲೀಸರ ಅಮಾನತು

Bangalore Crime : ಬೆಂಗಳೂರು : ಯುವತಿಯೋರ್ವಳ ಮೊಬೈಲ್ ಫೋನ್ ಕರೆಗಳ ವಿವರಗಳನ್ನು ಸಂಗ್ರಹಿಸಿ ಖಾಸಗಿ ವ್ಯಕ್ತಿಗೆ ನೀಡಿದ ಆರೋಪದ ಮೇರೆಗೆ ಪೊಲೀಸ್ ಇಲಾಖೆಯ ಮೂವರನ್ನು ಸೇವೆಯಿಂದ ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ.

ಈ ಪ್ರಕರಣದ ಕುರಿತಂತೆ ಯುವತಿಯು ಪೊಲೀಸರಿಗೆ ( Bangalore Crime) ನೀಡಿದ್ದ ದೂರಿನಂತೆ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ಮೂವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದ್ದರು.

ಈ ವರದಿ ಆಧರಿಸಿ ಪೊಲೀಸ್ ಇಲಾಖೆಯ ಮೂವರು ನೌಕರರನ್ನು ಅಮಾನತುಗೊಳಿಸಿ, ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಕೇಂದ್ರ ವಿಭಾಗದ ಸೂಪರಿಂಟೆಂಡೆಂಟ್ ಸುರೇಶ್, ಪೂರ್ವ ವಿಭಾಗದ ತಾಂತ್ರಿಕ ಘಟಕದ ಹೆಡ್ ಕಾನ್‌ಸ್ಟೆಬಲ್ ಸೋಮಶೇಖರ್ ಹಾಗೂ ಕಾನ್‌ಸ್ಟೆಬಲ್ ನಾಗರಾಜ್ ಎಂಬವರೇ ಅಮಾನತುಗೊಂಡವರು.

Leave A Reply

Your email address will not be published.