ಮದ್ಯಪ್ರಿಯರಿಗೆ ಬಿಗ್‌ ಶಾಕಿಂಗ್‌..!ಈ ಮೂರು ಜಿಲ್ಲೆಗಳಲ್ಲಿ ಮದ್ಯದಂಗಡಿ ಬಂದ್

Alcohol ban :ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಮದ್ಯ ಸೇವನೆ ಮಾಡುವವರಿಗೇನು ಕಮ್ಮಿಯಿಲ್ಲ. ಅದರಲ್ಲೂ ಕೆಲವೊಂದು ಸಂದರ್ಭದಲ್ಲಿ ಮದ್ಯ ಮಾರಾಟವನ್ನೇ ಬ್ಯಾನ್‌ (Alcohol ban) ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಮದ್ಯ ಖರೀದಿಸೋದಕ್ಕಾಗಿ ಮದ್ಯ ಪ್ರಿಯರು ಹುಡುಕಾಟದಲ್ಲಿ ತೊಡಗುತ್ತಾರೆ.

ಇದೀಗ ಇಂತಹದ್ದೇ ಸಮಸ್ಯೆಯೊಂದು ಮೂರು ಜಿಲ್ಲೆಗಳಲ್ಲಿ ಮದ್ಯ ಪ್ರಿಯರು ಅನುಭವಿಸಲಿದ್ದಾರೆ. ಮೂರು ದಿನಗಳವರೆಗೆ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ. ಅಷ್ಟಕ್ಕೂ ಕಾರಣವೇನು ಗೊತ್ತಾ? ವಿಶಾಖಪಟ್ಟಣಂ, ವಿಜಯನಗರಂ ಮತ್ತು ಶ್ರೀಕಾಕುಳಂ ಜಿಲ್ಲೆಗಳಲ್ಲಿ ಶಿಕ್ಷಕರು ಮತ್ತು ಪದವೀಧರ ಎಂಎಲ್ಸಿ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರವು ಮದ್ಯ ಪ್ರಿಯರಿಗೆ ಶಾಕಿಂಗ್‌ ಸುದ್ದಿ ನೀಡಿದ್ದು ಮೂರು ಜಿಲ್ಲೆಗಳಲ್ಲಿ ಮದ್ಯದಂಗಡಿಗಳು ಮೂರು ದಿನಗಳವರೆಗೆ ಮುಚ್ಚಲ್ಪಡುತ್ತವೆ.

ಮೇ 11 ರ ಸಂಜೆ 4 ರಿಂದ ಮೇ 13 ರ ಸಂಜೆ 4 ರವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಸರ್ಕಾರ ಆದೇಶಿಸಿದೆ. ಇದೇ ತಿಂಗಳ 13ರಂದು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮತ ಎಣಿಕೆ ನಡೆಯುವ 16 ರಂದು ಮತ ಎಣಿಕೆ ಕೇಂದ್ರ ಮತ್ತು ಸುತ್ತಮುತ್ತಲಿನ ಮದ್ಯದಂಗಡಿಗಳನ್ನು ಮುಚ್ಚಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, ಶಿಕ್ಷಕರ ಮತ್ತು ಪದವೀಧರ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್ 13 ರಂದು ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಆಂಧ್ರಪ್ರದೇಶದ 14 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆದಾಗ್ಯೂ, ಒಂಬತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳ ಪೈಕಿ 5 ಸ್ಥಾನಗಳನ್ನು ಆಡಳಿತಾರೂಢ ವೈಎಸ್ಆರ್ಸಿಪಿ ಸರ್ವಾನುಮತದಿಂದ ಗೆದ್ದಿದೆ. ಇನ್ನೂ ನಾಲ್ಕು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೂರು ಪದವೀಧರ ಮತ್ತು ಎರಡು ಶಿಕ್ಷಕರ ಎಂಎಲ್ಸಿ ಸ್ಥಾನಗಳಿಗೆ ಮಾರ್ಚ್ 13 ರಂದು ಚುನಾವಣೆ ನಡೆಯಲಿದೆ. ಮಾರ್ಚ್ 16ರಂದು ಮತ ಎಣಿಕೆ ನಡೆಯಲಿದೆ. ಅಂದೇ ಫಲಿತಾಂಶ ಹೊರಬೀಳಲಿದೆ.

Leave A Reply

Your email address will not be published.