Home National Krishi Ashirvaad Yojana : 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ...

Krishi Ashirvaad Yojana : 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5000 ರೂಪಾಯಿಗಳ ಆರ್ಥಿಕ ಸಹಾಯ!

Krishi Ashirvaad Yojana

Hindu neighbor gifts plot of land

Hindu neighbour gifts land to Muslim journalist

Krishi Ashirvaad Yojana: ರೈತರೇ ಗಮನಿಸಿ, ನಿಮಗಿದೋ ಬಹು ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ. ಕೃಷಿಯನ್ನು ನೆಚ್ಚಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ (Government) ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ, ಈ ಊರಿನ ರೈತರಿಗೆ ಬಂಪರ್ ಸಿಹಿ ಸುದ್ದಿ ಇದ್ದು, ಕೃಷಿ ಆಶೀರ್ವಾದ ಯೋಜನೆಯನ್ನು(Krishi Ashirvaad Yojana) ಜಾರ್ಖಂಡ್ (Jharkhand) ಸರ್ಕಾರ ನಡೆಸುತ್ತಿದ್ದು, ಈ ರೈತರಿಗೆ ಸರ್ಕಾರ ಆರ್ಥಿಕ ನೆರವನ್ನು ನೀಡಲು ಮುಂದಾಗಿದೆ.

ಕೃಷಿ ಆಶೀರ್ವಾದ ಯೋಜನೆಯು(Krishi Ashirvaad Yojana) ಜಾರ್ಖಂಡ್ ಸರ್ಕಾರವು ನಡೆಸುತ್ತಿರುವ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ ಪ್ರತಿ ಎಕರೆಗೆ 5000 ರೂಪಾಯಿಗಳ ಆರ್ಥಿಕವಾಗಿ ನೆರವನ್ನು ಒದಗಿಸಲಾಗುತ್ತದೆ. ಖಾರಿಫ್ ಹಂಗಾಮಿನ ಕೃಷಿಗೆ ಮೊದಲು ಈ ಹಣವನ್ನು(Amount) ರೈತರ(Farmers)ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಕೃಷಿ ಆಶೀರ್ವಾದ ಯೋಜನೆಯಡಿ 5 ಎಕರೆ ಜಮೀನು ಹೊಂದಿರುವ ರೈತರು ಗರಿಷ್ಠ 25,000 ರೂ. ಪಡೆಯಬಹುದು. ರಾಜ್ಯದಲ್ಲಿ ಪಿಎಂ ಕಿಸಾನ್ ನಿಧಿಯ(PM Kisan Samman Yojana Scheme) ಲಾಭ ಪಡೆಯುವ ರೈತರಿಗೆ ಕನಿಷ್ಠ 11,000 ರೂ. ಮತ್ತು ಗರಿಷ್ಠ 31,000 ರೂ. ಲಭ್ಯವಾಗುತ್ತದೆ.

ಈ ಯೋಜನೆಗೆ ಸಂಬಂಧಿಸಿ ಕೆಲ ಷರತ್ತುಗಳಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರು ಮಾತ್ರ ಕೃಷಿ ಆಶೀರ್ವಾದ್ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. 5 ಎಕರೆ ಅಥವಾ ಅದಕ್ಕಿಂತ ಕಡಿಮೆ ಭೂಮಿಯನ್ನು ಸಾಗುವಳಿ ಮಾಡುವ ರೈತರಿಗೆ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. 22 ಲಕ್ಷ 47 ಸಾವಿರ ರೈತರಿಗೆ ಸರ್ಕಾರದ ಈ ಯೋಜನೆಯ ಲಾಭವನ್ನು ಒದಗಿಸಲಾಗುತ್ತದೆ.

ಈ ಯೋಜನೆಗೆ ಅರ್ಹರಾದ ರೈತರು ಹಂಗಾಮಿನ ಕಟಾವಿಗೆ ಮೊದಲೇ ಸರ್ಕಾರದಿಂದ 5000 ರೂ. ಪಡೆಯಬಹುದಾಗಿದ್ದು, ಪಿಎಂ ಕಿಸಾನ್ ಅಡಿಯಲ್ಲಿ ಈಗಾಗಲೇ ವಾರ್ಷಿಕ 6000 ರೂ.ಗಳ ಅನುಕೂಲವನ್ನು ಪಡೆಯುತ್ತಿದ್ದಾರೆ. ಈ ಮೂಲಕ ವರ್ಷದಲ್ಲಿ ಒಟ್ಟು 11,000 ರೂ. ಪಡೆದಂತಾಗುತ್ತದೆ. ಅದರಂತೇ,ರಾಜ್ಯ ಸರ್ಕಾರದಿಂದ 5 ಎಕರೆ ಕೃಷಿ ಭೂಮಿ ಹೊಂದಿರುವ ರೈತನ ಖಾತೆಗೆ 25 ಸಾವಿರ ರೂ. ಲಭ್ಯವಾದರೆ, ಕೇಂದ್ರ ಸರ್ಕಾರದಿಂದ ಆರು ಸಾವಿರ ದೊರೆಯಲಿದ್ದು, ಹೀಗೆ ಒಟ್ಟು 31 ಸಾವಿರ ರೂ. ರೈತರ ಕೈ ಸೇರಲಿದೆ.