Belthangady: ಇಬ್ಬರು ಯುವತಿಯರು ನಿಗೂಢ ಸಾವು ; ಸಾವಿನ ಸುತ್ತ ಅನುಮಾನ ವ್ಯಕ್ತ!!!

Two young women are mysterious-death : ಬೆಳ್ತಂಗಡಿ: ನೆರೆಕರೆಯ ಮನೆಯ ಇಬ್ಬರು ಯುವತಿಯರು (Two young women are mysterious-death) ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ (Belthangady) ನೆಲ್ಯಾಡಿಯಲ್ಲಿ ನಡೆದಿದೆ.

ಮೃತ ಯುವತಿಯರನ್ನು ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಎಂದು ಗುರುತಿಸಲಾಗಿದೆ.

ಇವರಿಬ್ಬರು ನೆರೆಕರೆಯವರಾಗಿದ್ದು, ಕೆಲ ಸಮಯಗಳಿಂದ ಸೇವಾ ಪ್ರತಿನಿಧಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಎ.4 ರಂದು ರಕ್ಷಿತಾ ಮತ್ತು ಲಾವಣ್ಯ ಮನೆಯಲ್ಲೇ ಇದ್ದರು. ಅಂದು ಸಂಜೆ ಇವರಿಬ್ಬರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ನೋವಿನಿಂದ ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು.

ತಕ್ಷಣವೇ ಮನೆಯವರು ಇವರಿಬ್ಬರನ್ನು ಸ್ಥಳೀಯರ ಸಹಕಾರದಿಂದ ನೆಲ್ಯಾಡಿ (Nelyadi) ಆಸ್ಪತ್ರೆಗೆ (hospital) ಚಿಕಿತ್ಸೆಗೆ ಕರೆದೊಯ್ದರು. ನಂತರ ವೈದ್ಯರ ಸಲಹೆಯಂತೆ ರಕ್ಷಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಇತ್ತ ಲಾವಣ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಯ ವೈದ್ಯರ ಸಲಹೆಯಂತೆ ಮನೆಯವರು ಆಕೆಯನ್ನು ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಎ.6 ರಂದು ಮುಂಜಾನೆ ಮೃತಪಟ್ಟಿದ್ದು, ಲಾವಣ್ಯ ಎ.6 ರಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ (death).

ನೆರೆಕರೆಯವರಾದ ಇವರಿಬ್ಬರ ಸಾವು ನಿಗೂಢವಾಗಿದೆ. ಇಬ್ಬರಿಗೂ ಒಂದೇ ಸಮಯದಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿದೆ. ಸದ್ಯ ಇವರ ಸಾವಿಗೆ ಕಾರಣವೇನೆಂದು ಸ್ಪಷ್ಟಗೊಂಡಿಲ್ಲ. ಇವರಿಬ್ಬರು ಆತ್ಮಹತ್ಯೆ (suicide) ಮಾಡಿಕೊಂಡರೇ? ಅಥವಾ ಇನ್ನೇನಾದರೂ ನಡೆದಿದೆಯೇ? ಎಂಬುದು ಪೊಲೀಸ್‌ ತನಿಖೆಯಿಂದ ಬಯಲಿಗೆ ಬರಲಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

 

ಇದನ್ನು ಓದಿ : Narega scheme : ನರೇಗಾ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಸಹಾಯಧನ : ತೋಟಗಾರಿಕೆ ಇಲಾಖೆಯಿಂದ ಅರ್ಹ ರೈತ ಫಲಾನುಭವಿಗಳಿಗೆ ಸೌಲಭ್ಯ! 

Leave A Reply

Your email address will not be published.