Chetan : ಬುದ್ಧನ ಮಂದಿರ ಒಡೆದು ತಿರುಪತಿ ದೇವಸ್ಥಾನ ನಿರ್ಮಿಸಲಾಗಿದೆ!! ನಟ ಚೇತನ್ ಮತ್ತೊಂದು ವಿವಾದಾತ್ಮಕ ಹೇಳಿಕೆ

Chetan : ಬುದ್ಧನ ಮಂದಿರ ಒಡೆದು ತಿರುಪತಿ ದೇವಸ್ಥಾನ ಕಟ್ಟಿದ್ದಾರೆ ಎಂದು ಅಪವಾದ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಭಕ್ತಾದಿಗಳು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಅಷ್ಟಕ್ಕೂ ಈ ಅಪವಾದ ಮಾಡಿರುವುದು, ಈಗಾಗಲೇ ಹಿಂದೂ ಧರ್ಮ, ಸಾಹಿತ್ಯದ ಬಗ್ಗೆ ಪದೇ ಪದೇ ಅಹಿಂಸಾ ವಿವಾದಾತ್ಮಕ ಹೇಳಿಕೆಯನ್ನು ನೀಡುವ ನಟ ಚೇತನ್ (Chetan)ಎಂಬುದು ಇಲ್ಲಿ ಗಮನಾರ್ಹ ಆಗಿದೆ.

ಈಗಾಗಲೇ ಹಲವಾರು ವಾದ ವಿವಾದದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಕೂಡ ಚೇತನ್ ಎದುರಿಸಿದ್ದಾರೆ. ಇದೀಗ ಯೂಟ್ಯೂಬ್ ಸಂದರ್ಶನವೊಂದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬುದ್ಧನ ಮಂದಿರ ಒಡೆದು ತಿರುಪತಿ ದೇವಸ್ಥಾನ ಕಟ್ಟಿದ್ದಾರೆ ಎಂದು ಯೂಟ್ಯೂಬ್ ಸಂದರ್ಶನದಲ್ಲಿ ಚೇತನ್ ಹೇಳಿದ್ದಾರೆ.

ಸಂದರ್ಶನದ ವಿಡಿಯೋ ಲಿಂಕ್ ಅನ್ನು ಫೇಸ್‌ಬುಕ್‌ನಲ್ಲಿ ಶೇರ್ ಮಾಡಿರುವ ನಟ ಚೇತನ್, “ಇತ್ತೀಚಿನ ಸಂದರ್ಶನವೊಂದರಲ್ಲಿ ತಿರುಪತಿ ಮೂಲತಃ ಬೌದ್ಧ ಮಂದಿರ ಎಂದು ನಾನು ಹೇಳಿದ್ದೇನೆ. ಕೆ ಜಮನದಾಸ್ ಅವರು ‘ತಿರುಪತಿ ಬಾಲಾಜಿ ಮೂಲತಃ ಬೌದ್ಧ ಮಂದಿರ’ (ಏಪ್ರಿಲ್ 14, 2001) ಎಂಬ ತಮ್ಮ ಪುಸ್ತಕದಲ್ಲಿ ಈ ಹೇಳಿಕೆಯನ್ನು ಮಾನ್ಯ ಮಾಡಿದ್ದಾರೆ. ಇತಿಹಾಸಕಾರರ ಪ್ರಕಾರ, ದೇವಾಲಯಗಳು ಎಂದಿಗೂ ವೈದಿಕ ಸಂಸ್ಥೆಗಳಾಗಿರಲಿಲ್ಲ – ಅವುಗಳನ್ನು ಬೌದ್ಧ ಧರ್ಮದಿಂದ ವಶಪಡಿಸಿಕೊಳ್ಳಲಾಗಿದೆ/ ಆಕ್ರಮಣ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ “ಕರ್ನಾಟಕಕ್ಕೆ ಪರಿಯಾರ್, ಅಂಬೇಡ್ಕರ್ ಸಿದ್ದಾಂತ ಅಗತ್ಯ ಇದೆ. ಬಿಜೆಪಿಯ ಹಿಂದುತ್ವ ಕೂಡ ಅಲ್ಲ. ಕಾಂಗ್ರೆಸ್, ಜೆಡಿಎಸ್, ಆಪ್‌ನ ಪೊಲಿಟಿಕಲ್ ಹಿಂದೂಯಿಸಂ ಅಲ್ಲ, ಕಮ್ಯೂನಿಸಂ ಕೂಡ ಅಲ್ಲ. ಹೆಚ್‌ಟಿಪಿಐ ಮೊದಲೇ ಅಲ್ಲ. ನನ್ನ ಕಣ್ಣಲ್ಲಿ ನಮ್ಮ ದೇಶದ ಯಾವುದೇ ಪಕ್ಷ ಪರಿವರ್ತನೆಯ ಸಿದ್ಧಾಂತ ಹೇಳುತ್ತಿಲ್ಲ. ಸೈದ್ಧಾಂತಿಕವಾಗಿ ನನಗೆ ಈ ವಿಚಾರಗಳ ಬಗ್ಗೆ ವಿರೋಧ ಇದೆ.”

“ಯಾವುದೇ ವ್ಯಕ್ತಿ ಮೇಲೆ ನನಗೆ ಕೋಪ ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸತ್ಯ ಹೇಳುವ ಹಕ್ಕು ನಿಮಗಿದೆ. ನಾನು ಕಂಡ ಸತ್ಯ ನಾನು ಹೇಳಬಲ್ಲೆ . ನಾನು ಅಂಕಿ ಅಂಶ, ದಾಖಲೆ ಇಟ್ಟುಕೊಂಡು ಮಾತನಾಡುತ್ತಿದ್ದೇನೆ. ಅದನ್ನು ಸೋಲಿಸಲು ಸಾಧ್ಯವಾದರೆ ನಿಮ್ಮ ದಾಖಲೆ ಇಡಿ. ರಾಮ ಎನ್ನುವ ವ್ಯಕ್ತಿ ಈ ಕಾಲದಲ್ಲಿ ಇದ್ದರು, ಇಲ್ಲಿ ಹುಟ್ಟಿದರು ಎಂದು ತೋರಿಸಿ, ನಿಮ್ಮ ಧಾರ್ಮಿಕ ನಂಬಿಕೆ ಸತ್ಯ ಇರಬಹುದು. ಆದರೆ ನಮ್ಮ ವೈಚಾರಿಕತೆ, ಬೌದ್ಧಿಕ ಪ್ರಪಂಚದ ಸತ್ಯ ಎಂದೆಂದಿಗೂ ಅಲ್ಲ. ಅದಕ್ಕೆ ಸಾಕ್ಷಿಯೂ ಇಲ್ಲ.” ಎಂದಿದ್ದಾರೆ

ಅದಲ್ಲದೆ “ನಿಜ ಹೇಳಬೇಕು ಅಂದರೆ ಈ ದೇವಸ್ಥಾನಗಳೆಲ್ಲಾ ಹಿಂದೆ ಬುದ್ಧ ವಿಹಾರಗಳು ಆಗಿತ್ತು. ವೈದಿಕ ಕಾಲ ಎನ್ನುವುದು ಕ್ರಿಸ್ತ ಪೂರ್ವ 1500 ಕ್ರಿಸ್ತಪೂರ್ವದಿಂದ 500 ಕ್ರಿಸ್ತಪೂರ್ವ ನಡುವಿನದ್ದು. ಆ ನಂತರ ಬುದ್ಧ ಬರ್ತಾರೆ. ವೈದಿಕ ಕಾಲದಲ್ಲಿ ಹೋಮ, ಹವಯ, ಯಜ್ಞ ಎಲ್ಲವೂ ಇತ್ತು. ಆದರೆ ದೇವಸ್ಥಾನ, ಮಂದಿರಗಳು ಇರಲಿಲ್ಲ. ಬುದ್ಧ ಬಂದಮೇಲೆ ಅಶೋಕನ ನಂತರ ಬೌದ್ಧ ಧರ್ಮ ಹರಡಿದ ನಂತರ ಬುದ್ಧ ಸ್ತೂಪಗಳು, ವಿಹಾರಗಳು ಬಂತು. ಆ ನಂತರ ಮತ್ತೆ ಬ್ರಾಹ್ಮಣ್ಯ, ವೈದಿಕ ಪರಂಪರೆ ಬಂದಾಗ 84 ಸಾವಿರ ಬುದ್ಧ ವಿಹಾರಗಳನ್ನು ಒಡೆದು ಹಾಕಿ ಹಿಂದೂ ಮಂದಿಗಳನ್ನಾಗಿ ಮಾಡಿದರು
“ಅಲ್ಲಿಯವರೆಗೂ ದೇವಸ್ಥಾನಗಳು ಇರಲಿಲ್ಲ. ಯಾಕಂದರೆ ವೈದಿಕ ಪರಂಪರೆಯಲ್ಲಿ ಹೋಮ, ಹವ ಇರುತ್ತೆ. ಇದಕ್ಕೆಲ್ಲಾ ದಾಖಲೆಗಳು ಇವೆ. ಇದಕ್ಕೆ ಎಲ್ಲಿ ಬೇಕಾದರೂ ಸಾಕ್ಷಿ ತೋರಿಸುತ್ತೇನೆ.

ಮುಖ್ಯವಾಗಿ ತಿರುಪತಿ, ಕೇದಾರನಾಥ ದೇವಸ್ಥಾನಗಳನ್ನು ಇದೇ ರೀತಿ ಕಟ್ಟಿದ್ದಾರೆ. ತಿರುಪತಿ ದೇವಸ್ಥಾನ ಕೂಡ ಮೊದಲು ಬುದ್ಧ ಮಂದಿರ ಆಗಿತ್ತು. ನಮ್ಮ ಇತಿಹಾಸ ದಾಖಲೆಗಳಲ್ಲಿ 84 ಸಾವಿರ ಬುದ್ಧ ವಿಹಾರಗಳು ಇವೆ ಎಂದು ಇದೆ. ಅದನ್ನೆಲ್ಲಾ ರಾಜ ಅಶೋಕ ಹಾಗೂ ಆತನ ನಂತರದವರು ಕಟ್ಟಿರುವುದು. 185 ಕ್ರಿಸ್ತಪೂರ್ವ ಬಂದಮೇಲೆ ವೈದಿಕ ಪರಂಪರೆ ವಾಪಸ್ ಬಂದಮೇಲೆ ಈ ಬುದ್ಧ ವಿಹಾರಗಳನ್ನು ಒಡೆದು, ಬುದ್ಧ ಬಿಕ್ಕುಗಳನ್ನು ಸಾಯಿಸೋದು, ಬುದ್ಧ ವಿಹಾರಗಳನ್ನು ವೈದಿಕ ಮಂದಿರಗಳಾಗಿ ಮಾಡಿದ್ದರು” ಎಂದಿದ್ದಾರೆ.

ಒಟ್ಟಿನಲ್ಲಿ ಹಿಂದೂ ಧರ್ಮ, ಸಾಹಿತ್ಯದ ಬಗ್ಗೆ ಪದೇ ಪದೇ ಅಹಿಂಸಾ ವಿವಾದಾತ್ಮಕ ಹೇಳಿಕೆಯನ್ನು ನೀಡುವ ನಟ ಚೇತನ್ ಇನ್ನಷ್ಟು ಸಮಸ್ಯೆಗಳನ್ನು ಸಮಾಜದಲ್ಲಿ ತಂದಿಡುತ್ತಿದ್ದಾರೆ.

Leave A Reply

Your email address will not be published.