Puttur Election: ಮೇ 6 ರಂದು ಪುತ್ತೂರಿಗೆ ಯೋಗಿ ಆದಿತ್ಯನಾಥ್ ಭೇಟಿ !

Share the Article

Yogi Visit to Puttur: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ (Karnataka election) ನಡೆಯಲಿದ್ದು, ಈ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪಕ್ಷದ ಗೆಲುವಿಗಾಗಿ ಸಿನಿಮಾ ನಟ, ನಟಿಯರೂ ಪ್ರಚಾರದಲ್ಲಿ ಕೈ ಜೋಡಿಸಿದ್ದಾರೆ. ಇದೀಗ ಉತ್ತರ ಪ್ರದೇಶದ (uttar pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಚುನಾವಣೆ ಹಿನ್ನೆಲೆ ಪುತ್ತೂರಿಗೆ (Yogi Visit to Puttur) ಭೇಟಿ ನೀಡಲಿದ್ದಾರೆ.

ಯೋಗಿ ಆದಿತ್ಯನಾಥ್‌ ಮೇ 6ಕ್ಕೆ ಪುತ್ತೂರಿಗೆ ಭೇಟಿ ನೀಡಲಿದ್ದು, ದಕ್ಷಿಣ ಕನ್ನಡ (dakshina Kannada) ಮತ್ತು ಉಡುಪಿ (Udupi) ಜಿಲ್ಲೆಯಲ್ಲಿ ಬಿಜೆಪಿ (bjp) ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಶೃಂಗೇರಿಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಪುತ್ತೂರಿಗೆ (puttur) 12.30ಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

“ಮಂಗಳೂರಿನ (mangaluru) ಹಲವು ಸ್ಥಳಗಳಿಗೆ ಭೇಟಿ ನೀಡಲಿರುವ ಯೋಗಿ 6ರಂದು ಮಧ್ಯಾಹ್ನ 2 ಗಂಟೆಗೆ ಬಂಟ್ವಾಳ, 3.30ಕ್ಕೆ ಕಾರ್ಕಳ ಮತ್ತು ಸಂಜೆ 5 ಗಂಟೆಗೆ ಹೊನ್ನಾವರಕ್ಕೆ ಭೇಟಿ ನೀಡಲಿದ್ದಾರೆ. ಹಾಗೇ ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ” ಎಂದು ಮಂಗಳೂರು ವಿಭಾಗ ಉಸ್ತುವಾರಿ ಉದಯಕುಮಾರ್‌ ಶೆಟ್ಟಿ ಕಿದಿಯೂರು ಹೇಳಿದ್ದಾರೆ.

ಇದನ್ನೂ ಓದಿ: FIR on V Somanna: ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮೇಲೆ FIR !

Leave A Reply