Chamarajnagar: ಉಚಿತ ಬಸ್ ಪ್ರಯಾಣ ಎಫೆಕ್ಟ್ : ಬಸ್ ಹತ್ತೋ ಭರದಲ್ಲಿ ಡೋರ್ ಮುರಿದ ನಾರಿಮಣಿಯರು!! ಕಂಡಕ್ಟರ್ ಪರದಾಟ!!

Latest Karnataka news Congress guarantee Shakti scheme effect KSRTC bus door broken by passengers in chamarajanagar

Shakti scheme effect : ರಾಜ್ಯದಲ್ಲಿ ಜಾರಿಯಾಗಿರೋ ಶಕ್ತಿ ಯೋಜನೆಗೆ (ಮಹಿಳೆಯರ ಉಚಿತ ಬಸ್ ಪ್ರಯಾಣ) ಭರ್ಜರಿಯಾದ ರೆಸ್ಪಾನ್ಸ್ ಸಿಗುತ್ತಿದೆ. ರಾಜ್ಯಾದ್ಯಂತ ಮಹಿಳೆಯರು ಇದರ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೀಗ ಚಾಮರಾಜನಗರದಲ್ಲಿ (Chamarajanagar) ಬಸ್ ಒಂದು ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಹೌದು, ಕಾಂಗ್ರೆಸ್​ನ(Congress) ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ (Shakti scheme effect) ಜಾರಿಗೆ ಬಂದು ಒಂದು ವಾರ ಕಳೆಯುವಷ್ಟರಲ್ಲಿ ನಾನಾ ಅವಾಂತರಗಳು ನಡೆದುಹೋಗಿವೆ. ಪ್ರಯಾಣ ಫ್ರೀ ಫ್ರೀ ಎನ್ನುತ್ತಾ ಅಜ್ಜಿಯೊಬ್ಬರು ಇಡೀ ಒಂದು ಬಸ್ ಅನ್ನು ಬುಕ್ ಮಾಡಲು ಹೋದಂತಹ ಘಟನೆ ನಿನ್ನೆ ದಿನ ಬೆಂಗಳೂರಿನಲ್ಲಿ ನಡೆದು ಭಾರೀ ಸುದ್ದಿಯಾಗಿತ್ತು. ಆದರೆ ಈ ಬೆನ್ನಲ್ಲೇ ಚಾಮರಾಜನಗರದಲ್ಲಿ (Chamarajanagar) ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನಿಡಿತ್ತು. ಆದರೆ ಇಲ್ಲಿ ಪ್ರಯಾಣಿಕರೇ ಸೇರಿ ಬಸ್ ಡೋರ್ ಕಿತ್ತು ಹಾಕಿದ್ದಾರೆ. ಹೌದು, ವಾರಾಂತ್ಯ ಹಾಗೂ ಮಣ್ಣೆತ್ತಿನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಹಿಳೆಯರು ತೋರಿದ ಶಕ್ತಿಗೆ ಬಸ್​ವೊಂದರ ಬಾಗಿಲು ಕಳಚಿ ಹೋಗಿದೆ.

ಸೋಮವಾರ ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ (Male Mahadeshwara) ಬೆಟ್ಟದ ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಬಸ್ಸಿನ ಡೋರ್ ಮುರಿದು ಬಿದ್ದಿದೆ. ಇದರಿಂದಾಗಿ ಕಂಡಕ್ಟರ್ ಪರದಾಡೋ ಪರಿಸ್ಥಿತಿ ಕೂಡ ಉಂಟಾಗಿದೆ.

ಅಂದಹಾಗೆ ಈಗಾಗಲೇ ಬಸ್​ನಲ್ಲಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಧಾವಿಸುತ್ತಿದ್ದು, ನಿರ್ವಾಹಕರು ಉಳಿದವರಿಗೆ ಟಿಕೆಟ್ ನೀಡಲಿಕ್ಕೂ ಪರದಾಡಬೇಕಾದಂಥ ಘಟನೆಗಳೂ ಜರುಗಿವೆ. ಪುರುಷರು ಟಿಕೆಟ್​ಗೆ ದುಡ್ಡು ಕೊಟ್ಟೂ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ, ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಂದ ಸೀಟ್​ಗಾಗಿ ಕಿತ್ತಾಟ ಮುಂತಾದವು ಕೂಡ ನಡೆದಿವೆ. ಇನ್ನು ಬೆಳಗ್ಗೆಯಿಂದ ಕಾದರೂ ಕೆಲವರಿಗೆ ರಷ್‍ನಿಂದ ಬಸ್ ಹತ್ತಲು ಆಗಿರಲಿಲ್ಲ. ನಿಲ್ದಾಣದಲ್ಲೇ ಕಾದು ನಿಲ್ಲುವಂತಾಗಿದೆ ಎಂದು ಕೆಲವರು ಗೋಳಾಡಿದ್ದಾರೆ. ಬಸ್‍ಗಳಲ್ಲಿ ಮಹಿಳೆಯರೇ ತುಂಬಿಕೊಳ್ಳುತ್ತಿದ್ದಾರೆ. ನಾವು ಹೇಗೆ ಹೋಗೋದು ಎಂದು ಪುರುಷರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Prashanth Neel: ಪುನೀತ್ ರಾಜ್‌ಕುಮಾರ್ ಅಂದ್ರೆ ನನಗೆ ಒಂಚೂರು ಇಷ್ಟವಿಲ್ಲ, ಅವರನ್ನು ಕಂಡ್ರೆ ಆಗಲ್ಲ !! ಶಾಕಿಂಗ್ ಹೇಳಿಕೆ ನೀಡಿದ ನಿರ್ದೇಶಕ ಪ್ರಶಾಂತ್ ನೀಲ್ !!

Leave A Reply

Your email address will not be published.