Bengaluru Mysuru Highway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ನಿಲ್ಲದ ಮರಣ ಮೃದಂಗ; ಭೀಕರ ಅಪಘಾತಕ್ಕೆ ಯುವಕರಿಬ್ಬರ ದಾರುಣ ಸಾವು

Latest Karnataka accident news terrible accident on Bengaluru Mysore expressway to died on the spot

Bengaluru Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸಾವಿನ ಹೆದ್ದಾರಿಯೇ ಎಂಬ ಸಂಶಯದ ಜೊತೆಗೆ ಇಲ್ಲಿ ನಡೆಯುವ ಅಪಘಾತಗಳು, ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಜನವರಿಯಿಂದ ಇಲ್ಲಿಯವರೆಗೂ ಇಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 110.

ಇದೀಗ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ(Bengaluru Mysuru Expressway)ಮತ್ತೊಂದು ಭೀಕರ ಅಪಘಾತವಾಗಿದೆ. ಅಪರಿಚಿತ ವಾಹನಕ್ಕೆ ಬೈಕೊಂಡು ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ (Mandya) ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ಈ ಘಟನೆ ನಡೆದಿದೆ.

ಬೈಕ್‌ನಲ್ಲಿದ್ದ ಮಣಿ(25),ಜನಾರ್ದನ ಪೂಜಾರಿ (21)ಸಾವನ್ನಪ್ಪಿರುವ ದುರ್ದೈವಿಗಳು. ಇವರಿಬ್ಬರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೃತ ಯುವಕರ ಶವವನ್ನು ಮದ್ದೂರು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Manipur Violence: ಮಹಿಳೆಯರ ಒತ್ತಾಯಕ್ಕೆ ಮಣಿದ ಸೇನೆ; 12 ಉಗ್ರರ ಬಿಡುಗಡೆ

Leave A Reply

Your email address will not be published.