ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

Uttar Pradesh: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಬಗ್ಗೆ(Uttar Pradesh)ಬುಧವಾರ ವರದಿಯಾಗಿದೆ.

 

ಉತ್ತರ ಪ್ರದೇಶದ ಸಹರಾನ್‌ಪುರ ಬಳಿ ಚಂದ್ರಶೇಖರ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ. ದಾಳಿಮಾಡಿದವರು ಹರಿಯಾಣದ ಪರವಾನಗಿ ಫಲಕದ ಕಾರಿನಲ್ಲಿ ಸ್ಥಳಕ್ಕೆ ಬಂದು ಚಂದ್ರಶೇಖರ್ ಆಜಾದ್ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ.

 

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಅಂಬೇಡ್ಕರ್‌ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರಿನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಸಹರಾನ್‌ಪುರ ಎಸ್‌ಎಸ್‌ ಡಾ. ವಿಪಿನ್ ತಾಡಾ ತಿಳಿಸಿದ್ದಾರೆ.

ಇದನ್ನೂ ಓದಿ :ಬಿಳಿ ಕೂದಲ ಸಮಸ್ಯೆಯೇ? ಚಿಂತೆ ಬಿಡಿಈ ಮೂಲಿಕೆಯ ರಸದಿಂದ ನಿಮ್ಮ ಕೂದಲನ್ನು ಬುಡ ಸಮೇತ ಕಪ್ಪಗಾಗಿಸಿ!

Leave A Reply

Your email address will not be published.