Sarvapalli Radhakrishnan National Award: ಪ್ರತಿಷ್ಠಿತ ಸರ್ವಪಳ್ಳಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾದ ಉಪನ್ಯಾಸಕಿ: ಸುಳ್ಯದ ಸಾಧಕಿ ಡಾಕ್ಟರ್ ಅನುರಾಧ ಕುರುಂಜಿಗೆ ಸಂದ ಗೌರವ !

Sullia news Anuradha kurunji won the prestigious Sarvapalli Radhakrishnan National Award

Sarvapalli Radhakrishnan National Award: ಸಮಾಚಾರ ಸೇವಾ ಸಂಘ (ರಿ), ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ (Sarvapalli Radhakrishnan National Award) ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ.

ಅನುರಾಧಾ (Anuradha) ಅವರಿಗೆ ಪ್ರತಿಷ್ಠಿತ ಸರ್ವಪಳ್ಳಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ. ಅನುರಾಧಾ ಅವರ ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ ಹಾಗೂ ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ‘ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಇವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಅಂದಹಾಗೆ, ಅನುರಾಧಾ ಅವರು ಕುರುಂಜಿ ಪದ್ಮಯ್ಯ ಗೌಡ ಮತ್ತು ದಿ. ಸೀತಮ್ಮ ಕುರುಂಜಿ ದಂಪತಿಗಳ ಪುತ್ರಿ. ಇವರು ಪತಿ ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ್ ಬಿಳಿನೆಲೆಯವರು. ಅನುರಾಧಾ ಅವರು ಈ ಹಿಂದೆ ಚಂದನ ಟಿವಿಯ ಸ್ವರ ಮಾಧುರ್ಯ ಪ್ರಶಸ್ತಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಿಂದ ಪ್ರಶಸ್ತಿಯನ್ನು ಪಡೆದಿದ್ದಾರೆ.

ಅಷ್ಟೆ ಅಲ್ಲದೆ, ಸ್ಕೌಟ್ – ಗೈಡ್ ಶಿಕ್ಷಕಿಯಾಗಿದ್ದರು. ರೆಡ್ ಕ್ರಾಸ್ ನ ಕಾರ್ಯಕ್ರಮಾಧಿಕಾರಿಯಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಿದ್ದು, ಈ ಮೂಲಕ 300ಕ್ಕೂ ಅಧಿಕ ವಿದ್ಯಾರ್ಥಿ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ಎರಡು ಬಾರಿ ಮಂಗಳೂರು ವಿವಿ ಮಟ್ಟದ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಹಾಗೂ ಘಟಕ ಪ್ರಶಸ್ತಿ ಲಭಿಸಿದೆ.

ವಿದ್ಯಾರ್ಥಿಯಾಗಿದ್ದಾಗಲೇ ಎನ್ಎಸ್ಎಸ್ ನಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಎರಡೂ ಹಂತದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ (RD Parade) ಇವರು ಭಾಗವಹಿಸಿದ್ದು, ಸುಳ್ಯ ತಾಲೂಕಿನ ಪ್ರಪ್ರಥಮ ಹಾಗೂ ಸುಳ್ಯ ಎನ್ನೆಂಸಿಯ 47 ವರ್ಷಗಳ ಇತಿಹಾಸದಲ್ಲಿಯೇ ಏಕೈಕ ವಿದ್ಯಾರ್ಥಿನಿ ಎಂಬ ದಾಖಲೆ ಬರೆದಿದ್ದಾರೆ.

ಸಾಮಾಜಿಕವಾಗಿ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಚಂದನ ಟಿವಿಯಲ್ಲಿ ತರಬೇತಿ ನೀಡಿದ್ದಾರೆ. ಸುಮಾರು 1639 ತರಬೇತಿ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಮಾಜ ಸೇವೆಯಲ್ಲಿ, ಜ್ಞಾನ ಪ್ರಸರಣೆಯಲ್ಲಿ ನಿರತ, ಜೇಸಿರೆಟ್ ಅಧ್ಯಕ್ಷೆಯಾಗಿ ದಾಖಲೆಯ ಎರಡು ವಲಯ, ಮೂರು ರಾಷ್ಟ್ರ ಪ್ರಶಸ್ತಿಗಳ ಗರಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಸಂಘಟಕಿಯಾಗಿ ಸೇವೆ, ಸಾಹಿತ್ಯಕವಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಆಕಾಶವಾಣಿಗಳಲ್ಲಿ ನಿರಂತರ ಭಾಷಣಗಳ ಬಿತ್ತರ, ಕವಿಗೋಷ್ಠಿ, ಯಕ್ಷಗಾನ, ಕ್ರೀಡೆ, ಸಂಗೀತ, ಸಮಾಜ ಸೇವೆಯಲ್ಲಿ ಆಸಕ್ತಿ. ಐದು ಕೃತಿಗಳ ಅನಾವರಣ, ವಿವಿಧ ಸಂಸ್ಥೆಗಳ ಗೃಹ ಪತ್ರಿಕೆ, ವಾರ್ತಾ ಪತ್ರಿಕೆಗಳ ಸಂಪಾದಕತ್ವ, ಸಂಶೋಧನಾ ಲೇಖನಗಳ ಪ್ರಕಟ, ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ, ಹೀಗೆ ಇವರ ಈ ಎಲ್ಲಾ ಕಾರ್ಯವೈಖರಿಯನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ‌ ಸಂಗತಿಯಾಗಿದೆ.

ಇದನ್ನೂ ಓದಿ: Women vomits in bus: ವಾಂತಿ ಮಾಡಲೆಂದು ಬಸ್ಸಿನ ಹೊರಗೆ ತಲೆ ಹಾಕಿದ ಮಹಿಳೆ! ನಂತರ ನಡೆದದ್ದೇ ಊಹಿಸದ ಅಪಘಾತ!!!

Leave A Reply

Your email address will not be published.