HomeKarnataka State Politics UpdatesParliament Speaker: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಆಯ್ಕೆ !!

Parliament Speaker: ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಆಯ್ಕೆ !!

Hindu neighbor gifts plot of land

Hindu neighbour gifts land to Muslim journalist

Parliment Speaker : ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ

ಲೋಕಸಭೆ ಚುನಾವಣೆ(Parliament Election) ಮುಗಿದು NDA ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜೂನ್ 24 ರಿಂದ ಮೊದಲ ಲೋಕಸಭಾ ಅಧಿವೇಶನ ಕೂಡ ನಡೆಯಲಿದೆ. ಈ ಬೆನ್ನಲ್ಲೇ ಭಾರೀ ಕುತೂಹಲ ಕೆರಳಿಸಿದ ಲೋಕಸಭಾ ಸ್ಪೀಕರ್ ಆಯ್ಕೆ ಇನ್ನೂ ತಣಿಯದಾಗಿದೆ. ಆದರೆ ಈ ನಡುವೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.

ಲೈಂಗಿಕ ಕ್ರಿಯೆಯನ್ನು ಇಷ್ಟು ನಿಮಿಷ ನಡೆಸಿದರೆ ಸಾಕು; ಇದೇ ಆರೋಗ್ಯಕ್ಕೆ ಒಳಿತು ಎನ್ನುತ್ತಾರೆ ಡಾಕ್ಟರ್ಸ್ !!

ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju) ಗುರುವಾರ ಮಾಹಿತಿ ನೀಡಿದ್ದು, ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ (Bhartruhari Mahtab) ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಸಚಿವರ ಟ್ವೀಟ್:
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ‘ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಹಂಗಾಮಿ ಸ್ಪೀಕರ್ ಸಹಾಯಕ್ಕೆ ಸುರೇಶ್ ಕೋಡಿಕುನ್ನಿಲ್, ತಾಳಿಕ್ಕೋಟ್ಟೈ ರಾಜುತೇವರ್ ಬಾಲು, ರಾಧಾ ಮೋಹನ್ ಸಿಂಗ್, ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಸುದೀಪ್ ಬಂದೋಪಾಧ್ಯಾಯ ಇವರುಗಳನ್ನು ನೇಮಕ ಮಾಡಲಾಗಿದೆ. ಹೊಸ ಸ್ಪೀಕರ್ ಆಯ್ಕೆವರೆಗೂ ಕಾರ್ಯ ನಿರ್ವಹಣೆ ಮಾಡಲಿದ್ದಾರೆ ಎಂದು ರಿಜಿಜು ಬರೆದುಕೊಂಡಿದ್ದಾರೆ.

Karnataka Police: ರಾಜ್ಯಾದ್ಯಲ್ಲಿ ಇನ್ಮುಂದೆ ವಾಹನಗಳ ಹೆಡ್ಲೈಟ್ ಗೆ ಈ ಬಲ್ಬ್ ಬಳಸವಂತಿಲ್ಲ – ತಪ್ಪಿದರೆ ಕೇಸ್ ದಾಖಲು !!

RELATED ARTICLES

1 COMMENT

Most Popular

Recent Comments