Darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣ- ದರ್ಶನ್ ಮನೆಯ ಸಿಸಿಟಿವಿಯಿಂದ ಬಯಲಾಯ್ತು ಹೊಸ ರೋಚಕ ಸತ್ಯ !!

Darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder Case) ದರ್ಶನ್ ಜೈಲು ಪಾಲಾಗಿ ಸುಮಾರು 2 ತಿಂಗಳು ಕಳೆಯುತ್ತಾ ಬರುತ್ತಿದೆ. ಆದರೂ ದರ್ಶನ್(Darshan) ಗೆ ಬಿಡುಗಡೆಯ ಭಾಗ್ಯವಂತೂ ಸಧ್ಯಕ್ಕಿಲ್ಲ ಅನಿಸುತ್ತೆ. ಆದರೆ ಈ ನಡುವೆ ಅನೇಕ ಸತ್ಯಗಳು ಹೊರಬರುತ್ತಿವೆ.

ಹೌದು, ದರ್ಶನ್ ಗ್ಯಾಂಗ್ ಅಂದರ್ ಆದಾಗಲಿಂದಲೂ ಸಾಕ್ಷಿ ನಾಶಕ್ಕೆ ತುಂಬಾ ಪ್ರಯತ್ನಿಸುತ್ತಿದೆ. ಆದರೀಗ ಇದರ ನಡುವೆಯೂ ಸಿಐಡಿ ಸೈಬರ್ ತಜ್ಞರು ದರ್ಶನ್​ ಮನೆಯ ಸಿಸಿಟಿವಿ ದೃಶ್ಯಗಳನ್ನು ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ. ಪ್ರಮುಖ ಆರೋಪಿಗಳ ಚಲನವಲನದ ಜೊತೆಯಲ್ಲಿ ಕೃತ್ಯಕ್ಕೆ ಬಳಸಿದ್ದ ವಾಹನದ ಓಡಾಟ ಸಹ ಈ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಂದಹಾಗೆ ಪೊಲೀಸರು ರಿಟ್ರೀವ್​ ಮಾಡಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಕೊಲೆ ನಡೆದ ದಿನ ದರ್ಶನ್ ಸೇರಿ ಆರೋಪಿಗಳು ಹೊರಗೆ ಬಂದು ಹೋಗಿರುವುದು ಪತ್ತೆಯಾಗಿದೆ. ಜೂನ್ 8 ರಿಂದ ಜೂನ್ 10ರವರೆಗೆ ಕೊಲೆಯ ಆರೋಪಿಗಳ ಚಲನವಲನ ಈ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳು ಮಾತ್ರವಲ್ಲದೆ ಕೃತ್ಯಕ್ಕೆ ಬಳಸಿದ್ದ ವಾಹನಗಳ ಓಡಾಟ ಕೂಡ ಸೆರೆಯಾಗಿದೆ. ಹಾಗಾಗಿ ಪೊಲೀಸರು ಸಿಸಿಟಿವಿ ವಿಡಿಯೋ ರಿಟ್ರೀವ್ ಮಾಡಿ ಪಂಚನಾಮೆ ಮಾಡಿದ್ದಾರೆ.

ಇನ್ನು ಈಗಾಗಲೇ ಪೊಲೀಸರು ಹಲವು ಬಗೆಯ ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಇದರಿಂದಾಗಿ ಪವಿತ್ರಾ ಗೌಡ, ದರ್ಶನ್​ ಸೇರಿದಂತೆ ಎಲ್ಲ ಆರೋಪಿಗಳಿಗೆ ಢವಢವ ಶುರುವಾಗಿದೆ. ರೇಣುಕಾ ಸ್ವಾಮಿ ಬಳಸಿದ್ದ ಮೊಬೈಲ್​ನಲ್ಲಿದ್ದ ಮಾಹಿತಿಗಳು ಕೂಡ ಪೊಲೀಸರಿಗೆ ಲಭ್ಯವಾಗಿದೆ.

Leave A Reply

Your email address will not be published.