Sheikh Hasina : ಬಾಂಗ್ಲಾ ಪಿಎಂ ಶೇಕ್ ಹಸೀನಾ ಎಲ್ಲಾ ದೇಶ ಬಿಟ್ಟು ಯುಕೆ ಗೆ ಹೊರಟಿದ್ದೇಕೆ? ಭಾರತದಲ್ಲೇ ಇರಲು ಅನುಮತಿ ಇಲ್ಲವೇ?

Sheikh Hasina: ದೇಶಾದ್ಯಂತ ಹಿಂಸಾಚಾರ, ಘರ್ಷಣೆಗಳು (Bangladesh Protests) ಭುಗಿಲೆದ್ದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ (Bangladesh Prime Minister Sheikh Hasina) ಅವರು ರಾಜೀನಾಮೆ ನೀಡಿ ರಾಜಧಾನಿ ಢಾಕಾವನ್ನು (Dhaka) ತೊರೆದು ಭಾರತಕ್ಕೆ ಪಲಾಯನ ಮಾಡಿದ್ದಾರೆ. ಆದರೆ ಹಸೀನಾ ಹೆಚ್ಚು ಸಮಯ ಭಾರತದಲ್ಲಿ ಇರುವಂತಿಲ್ಲ, ಹೀಗಾಗಿ ಅವರು ಬ್ರಿಟನ್ ನಲ್ಲಿ ರಾಜಾಶ್ರಯ ಬಯಸಿದ್ದು, ಸದ್ಯದಲ್ಲೇ ಅಲ್ಲಿಗೆ ತೆರಳಲಿದ್ದಾರೆ. ಹಾಗಿದ್ರೆ ಅವರು ಹೆಚ್ಚು ಸಮಯ ಭಾರತದಲ್ಲಿರಲು ಏಕೆ ಸಾಧ್ಯವಿಲ್ಲ? ಎಲ್ಲಾ ಬಿಟ್ಟು ಬ್ರಿಟನ್ ಗೆ ತೆರಳುವುದೇಕೆ? ಇಲ್ಲಿದೆ ನೋಡಿ ಮಾಹಿತಿ.

ಹಸೀನಾ ಭಾರತಕ್ಕೆ ಬಂದಾಗಿನ ಬೆಳವಣಿಗೆ:
ಸೋಮವಾರ ಸಂಜೆ ದೆಹಲಿಯಿಂದ 30 ಕಿ.ಮೀ ದೂರದಲ್ಲಿರುವ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್‌ ವಾಯುನೆಲೆಗೆ ಹಸೀನಾ ಬಂದಿಳಿದಿದ್ದಾರೆ. ಹಿಂಡನ್‌ ವಾಯುನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರು ಶೇಖ್‌ ಹಸೀನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಶೇಖ್‌ ಹಸೀನಾ (Sheikh Hasina) ಅವರಿಗೆ ಯುಕೆ (United Kingdom) ರಾಜಾಶ್ರಯ ನೀಡಲು ಒಪ್ಪುವರೆಗೂ ಅವರಿಗೆ ಭಾರತ (India) ಮಧ್ಯಂತರ ರಾಜಾಶ್ರಯ ನೀಡಲಿದೆ.

ರಾಜಾಶ್ರಯ ಅರಸಿ ಯುಕೆಗೆ ಹೋಗುವುದೇಕೆ?
ಬಾಂಗ್ಲಾದೇಶ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರಿಗೆ ಇಬ್ಬರು ಹಸೀನಾ ಮತ್ತು ರೆಹನಾ ಇಬ್ಬರು ಪುತ್ರಿಯರು. ರೆಹನಾ ಅವರ ಪುತ್ರಿ ಟುಲಿಪ್‌ ಸಿದ್ದಿಕಿ ಲೇಬರ್‌ ಪಕ್ಷದ ನಾಯಕಿ ಮತ್ತು ಸಂಸತ್‌ ಸದಸ್ಯರಾಗಿದ್ದಾರೆ. ಅಲ್ಲದೆ ಯುಕೆ ಪೌರತ್ವವನ್ನು ಹೊಂದಿರುವ ಹಸೀನಾ ಅವರ ಕಿರಿಯ ಸಹೋದರಿ ರೆಹಾನಾ ಕೂಡ ಅವರ ಜೊತೆಯಲ್ಲಿದ್ದಾರೆ. ಈ ಕಾರಣಕ್ಕೆ ಹಸೀನಾ ಬ್ರಿಟನ್‌ಗೆ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಪರಿಸ್ಥಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ವಿವರಿಸಿದ್ದಾರೆ. ಮೋದಿ ಅವರು ಹಸೀನಾ ಅವರನ್ನು ಭೇಟಿ ಮಾಡುತ್ತಾರೆಯೇ ಎನ್ನುವುದರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಇಂದು ಮಧ್ಯಾಹ್ನದ ನಂತರ ಯುಕೆಗೆ ಹೋಗಲಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೆ ಇನ್ನೂ ರಾಜಾಶ್ರಯ ನೀಡುವ ಬಗ್ಗೆ ಯುಕೆ ಅನುಮತಿ ನೀಡಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಯುಕೆ ಅನುಮತಿ ನೀಡುವವರೆಗೂ ಹಸೀನಾ ಭಾರತದಲ್ಲೇ ಇರಲಿದ್ದಾರೆ.

ಭಾರತದಲ್ಲಿ ಅಲರ್ಟ್​:
ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಜೈಶಂಕರ್ ಜೊತೆ ಮಾತನಾಡಿದ್ದಾರೆ. ಸಂಸತ್ತಿನ ಹೊರಭಾಗದಲ್ಲಿ ಇಬ್ಬರೂ ಸಂಕ್ಷಿಪ್ತವಾಗಿ ಮಾತನಾಡಿದರು ಎಂದು ಕಾಂಗ್ರೆಸ್ ಹೇಳಿದೆ.

ಬಾಂಗ್ಲಾದಲ್ಲಿ ಹಿಂಸಾಚಾರಕ್ಕೆ ಕಾರಣ ಏನು?
ಬಾಂಗ್ಲಾದೇಶದಲ್ಲಿ ಪ್ರಸ್ತುತ ಕೋಟಾ ವ್ಯವಸ್ಥೆ ಪ್ರಕಾರ ಸರ್ಕಾರಿ ಉದ್ಯೋಗಗಳಲ್ಲಿ 56% ಕಾಯ್ದಿರಿಸಲಾಗಿದೆ. ಇದರಲ್ಲಿ 1971ರ ವಿಮೋಚನಾ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಶೇ.30, ಹಿಂದುಳಿದ ಜಿಲ್ಲೆಗಳವರಿಗೆ ಶೇ.10, ಮಹಿಳೆಯರಿಗೆ ಶೇ.10, ಜನಾಂಗೀಯ ಅಲ್ಪಸಂಖ್ಯಾತರಿಗೆ ಶೇ.5 ಹಾಗೂ ಅಂಗವಿಕಲರಿಗೆ ಶೇ.1 ಮೀಸಲಾತಿ ಕಲ್ಪಿಸಲಾಗಿದೆ. ವಿಮೋಚನಾ ಹೋರಾಟದ ಕುಟುಂಬಸ್ಥರಿಗೆ ಕಲ್ಪಿಸಿರುವ ಶೇ.30 ಮೀಸಲಾತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆಯನ್ನು ನಿರ್ಗಮಿತ ಪ್ರಧಾನಿ ಶೇಕ್‌ ಹಸೀನಾ ತಿರಸ್ಕರಿಸಿದ್ದರಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

Leave A Reply

Your email address will not be published.