Home News C M Siddaramaiah: ತುಂಗಭದ್ರಾ ವೈಫಲ್ಯಕ್ಕೆ ಕೇಂದ್ರ ಸರ್ಕಾರ ಕಾರಣ – ಸಿಎಂ ಸಿದ್ದರಾಮಯ್ಯ

C M Siddaramaiah: ತುಂಗಭದ್ರಾ ವೈಫಲ್ಯಕ್ಕೆ ಕೇಂದ್ರ ಸರ್ಕಾರ ಕಾರಣ – ಸಿಎಂ ಸಿದ್ದರಾಮಯ್ಯ

C M Siddaramaiah

Hindu neighbor gifts plot of land

Hindu neighbour gifts land to Muslim journalist

C M Siddaramaiah: ತುಂಗಭದ್ರಾ ಜಲಾಶಯದಲ್ಲಿ 19 ನೇ ಟ್ರಸ್ಟ್ ಗೇಟ್ ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡೋದಿಲ್ಲ. ಹಾಗೆ ಯಾರ ಮೇಲೆ ಗೂಬೆ ಕೂರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ತಾಲೂಕಿನ ಬಸಾಪೂರ ಗ್ರಾಮದ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಬೋರ್ಡ್ ಇರುವುದು ಕೇಂದ್ರ ಸರಕಾರದ ಅಧೀನದಲ್ಲಿ. ಬೋರ್ಡ್ ಗೆ ಐಎಎಸ್ ಅಧಿಕಾರಿಗಳನ್ನು ಭಾರತ ಸರಕಾರ ನೇಮಕ ಮಾಡುತ್ತದೆ‌. ಬೋರ್ಡ್ ನಲ್ಲಿ ರಾಜ್ಯ, ಆಂಧ್ರ, ತೆಲಂಗಾಣದ ಅಧಿಕಾರಿಗಳು ಇರುತ್ತಾರೆ.

ವಾಸ್ತವವಾಗಿ ನಿರ್ವಹಣೆ ವೈಫಲ್ಯ ಇರುವುದು ಕೇಂದ್ರ ಸರಕಾರದಿಂದ. ಇದೆಲ್ಲವನ್ನು ಆರೋಪ ಮಾಡಬೇಕಾಗಿರುವುದು ಕೇಂದ್ರದ ಮೇಲೆ, ಆದರೆ, ನಾನು ಡ್ಯಾಂ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ಬಿಜೆಪಿಯವರು ರಾಜಕೀಯವಾಗಿ ಟೀಕೆ ಮಾಡುತ್ತಾರೆ. ಅದಕ್ಕೆಲ್ಲ ನಾನು ಉತ್ತರ ಕೋಡೋದಕ್ಕೆ ಹೋಗೋದಿಲ್ಲ. ಈಗ ತುಂಗಭದ್ರಾ 19 ನೇ ಗೇಟ್ ಕಟ್ಟಾಗಿದೆ.
ಇದರಲ್ಲಿ ರಾಜ್ಯ ಸರಕಾರದ ಹೊಣೆಗೇಡಿತನ ಅಂದ್ರೆ ಏನರ್ಥ…? ಇದರ ನೇರ ಹೊಣೆ ಬೋರ್ಡ್ ನದ್ದು. ಆದರೂ ಇದರಲ್ಲಿ ನಾನು ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಹೇಳಲು ಹೋಗುವುದಿಲ್ಲ. ಸದ್ಯ ರೈತರ ಹಿತ ಕಾಯುವುದು ಮೊದಲ ಆದ್ಯತೆ ನಮ್ಮದು ಎಂದರು.

ತುಂಗಭದ್ರಾ ಜಲಾಶಯ 105 ಟಿಎಂಸಿ ತುಂಬಿತ್ತು. ಇದರಲ್ಲಿ 50 ಟಿಎಂಸಿ ನೀರು ಹೊರ ಬಿಡಬೇಕಿದೆ. ಉಳಿಯುವ ನೀರನ್ನು ರೈತರ ಅನುಕೂಲಕ್ಕೆ ಬಳಸಲಾಗುವುದು. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಬಿಡುವುದಿಲ್ಲ. ಮೊದಲನೇ ಬೆಳಗೆ ನೀರು ಕೊಟ್ಟೆ ಕೊಡುತ್ತೇವೆ. ಹವಾಮಾನ ಮೂನ್ಸೂಚನೆ ಪ್ರಕಾರ ಡ್ಯಾಂಗೆ ಆಗಸ್ಟ್‌, ಸೆಪ್ಟೆಂಬರ್‌, ಅಕ್ಡೊಂಬರ್ ತಿಂಗಳಲ್ಲಿ ಮತ್ತಷ್ಟು ನೀರು ಬರುವ ಸಾಧ್ಯತೆಯಿದೆ. ಎಷ್ಟು ನೀರು ಹೊರ ಹೋಗುತ್ತದೆ, ಅಷ್ಟು ನೀರು ಮಳೆಯಿಂದ ಮತ್ತೆ ಬರಲಿದೆ. ರೈತರು ಎದೆಗುಂದಬೇಕಿಲ್ಲ. ತುಂಗಭದ್ರಾ ರಾಜ್ಯದ ಹಳೆಯ ಜಲಾಶಯಗಳಲ್ಲಿ ಒಂದಾಗಿದೆ. ಅವತ್ತಿನಿಂದ ಏನು ತೊಂದರೆಯಾಗಿರಲಿಲ್ಲ.‌ ಮೊದಲ ಬಾರಿಗೆ ಗೇಟ್ ನ ಚೈನ್ ಲಿಂಕ್ ಕಟ್ ಆಗಿದೆ ಎಂದು ಮಾಹಿತಿ ನೀಡಿದರು.