R Ashok: ಚನ್ನಪಟ್ಟಣ ಉಪ ಚುನಾವಣೆ- ಇವರನ್ನೇ ಅಭ್ಯರ್ಥಿ ಮಾಡಿರೆಂದು ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದ ಆರ್ ಅಶೋಕ್!!

R Ashok: ಚನ್ನಪಟ್ಟಣ ಉಪ ಚುನಾವಣೆ(Channapattana By election) ಕಾವು ಮತ್ತೆ ರಂಗೇರುತ್ತಿದೆ. ಇದೀಗ ಕಾಂಗ್ರೆಸ್ ಗಿಂತಲೂ ದೋಸ್ತಿಗಳಾದ ಬಿಜೆಪಿ-ಜೆಡಿಎಸ್(BJP- JDS) ನಡುವೆ ಈ ಚುನಾವಣೆಯ ಚರ್ಚೆಗಳು ಗರಿಗೆದರಿವೆ. ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಎದುರಾಗಿದೆ. ಜೆಡಿಎಸ್ ಪರೋಕ್ಷವಾಗಿ ನನಗೆಂದರೆ ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್(C P Yogishwar) ನೇರವಾಗಿಯೇ ಟಿಕೆಟ್ ನನಗೆ ಎಂದಿದ್ದಾರೆ. ಒಟ್ಟಿನಲ್ಲಿ ಮೈತ್ರಿ ಒಳಗೆ ಇದು ಗೊಂದಲದ ಗೂಡಾಗಿದೆ. ಈ ನುಡವೆ ರಾಜ್ಯದ ವಿಪಕ್ಷ ನಾಯಕ ಆರ್ ಅಶೋಕ್(R Ashok) ಅವರು ನಾವು ಹೈಕಮಾಂಡ್ ಬಳಿ ತೆರಳಿ ಇವರಿಗೇ ಟಿಕೆಟ್ ಕೊಡಿ ಎಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

ಹೌದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರಿಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಬಿಜೆಪಿ-ಜೆಡಿಎಸ್​ ಮೈತ್ರಿ ನಂತರ ಚನ್ನಪಟ್ಟಣ ಕ್ಷೇತ್ರದ ಟಿಕೆಟ್​ ಯಾರಿಗೆ ಎಂಬ ಪ್ರಶ್ನೆ ಉದ್ಭವಿಸಿದ್ದು, ವಿರೋಧ ಪಕ್ಷದ ನಾಯಕ ಆರ್​​. ಅಶೋಕ್​ ಇದಕ್ಕೆ ಉತ್ತರಿಸಿದ್ದು, ಉಪಚುನಾವಣೆಯ ಟಿಕೆಟ್​​ ಅನ್ನು ಸಿಪಿ ಯೋಗೇಶ್ವರ್ (CP Yogeshwar)​ ಅವರಿಗೆ ನೀಡುವಂತೆ ಹೈಕಮಾಂಡ್​ ಬಳಿ ಮನವಿ ಮಾಡುತ್ತೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್​. ಡಿ.ಕುಮಾರಸ್ವಾಮಿ (HD Kumarawamy) ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್‌ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ‌ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದ ಹೇಳಿದರು.

Leave A Reply

Your email address will not be published.