Navaneet Singh: ‘ರಾಹುಲ್ ಗಾಂಧಿ ಭಾರತದ ನಂ.1 ಟೆರರಿಸ್ಟ್, ದೇಶದ ಬಹುದೊಡ್ಡ ಶತ್ರು’ – ನಾಲಗೆ ಹರಿಬಿಟ್ಟ ಕೇಂದ್ರ ಸಚಿವ

Ravaneet Singh: ‘ಭಾರತೀಯನಲ್ಲದ ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ರಾಹುಲ್‌ ಗಾಂಧಿ ದೇಶದ ಬಹುದೊಡ್ಡ ಶತ್ರು. ಅವರನ್ನು ಹಿಡಿದುಕೊಟ್ಟವರಿಗೆ ತಕ್ಕ ಬಹುಮಾನ ನೀಡಲಾಗುವುದು’ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌(Ravaneet Singh) ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಅವರು ಇತ್ತೀಚೆಗೆ ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ಖರ ಕುರಿತು ನೀಡಿದ್ದ ಹೇಳಿಕೆ ಭಾರೀ ಟೀಕೆ, ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಖ್ ನಾಯಕರು ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಬೆನ್ನಲ್ಲೇ ತಾನೂ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಭರದಲ್ಲಿ ಕೇಂದ್ರ ಸಚಿವ ರವನೀತ್‌ ನಾಲಿಗೆ ಹರಿಬಿಟ್ಟಿದ್ದಾರೆ. ಬಳಿಕ ಮಾತನಾಡಿದ ಅವರು ‘ಮೊದಲು ಅವರು ಮುಸ್ಲಿಮರನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಆಗಲಿಲ್ಲ. ಈಗ ಅವರು ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಈ ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿಯನ್ನು ಬೆಂಬಲಿಸುವುದಾದರೆ, ಇವರು ಕೂಡ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಏನು ಹೇಳಿದ್ದರು? ಯುಎಸ್‌ನ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಖ್ಖರ ಉದಾಹರಣೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಯ ಕುರಿತು ಹೇಳಿಕೆ ನೀಡಿದ್ದರು. ಇದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಹೀಗಾಗಿ ಸಿಖ್ ನಾಯಕರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

Leave A Reply

Your email address will not be published.