Tirupati Temple: ತಿರುಪತಿ ದೇವಾಲಯದಲ್ಲಿ ಹೊಸ ಹುರುಪು: ತಿಮ್ಮಪ್ಪನ ಭಕ್ತರಿಗೆ ಕೊಂಚ ನೆಮ್ಮದಿ

Tirupati Temple: ತಿರುಪತಿ ದೇವಾಲಯದಲ್ಲಿ (Tirupati Temple) ಈಗಾಗಲೇ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆ ದೇವಾಲಯದ ಪವಿತ್ರತೆಗೆ ಧಕ್ಕೆ ಬಂದಂತೆ ಆಗಿತ್ತು. ಅಲ್ಲದೇ ತಿಮ್ಮಪ್ಪನ ಭಕ್ತರಿಗೆ ಇದರಿಂದ ನೋವು ಉಂಟು ಮಾಡಿತ್ತು. ಇದೀಗ ತಿರುಮಲದಲ್ಲಿ ಹೊಸ ಹುರುಪು ಮೂಡಿದ್ದು, ಇದರಿಂದ ತಿಮ್ಮಪ್ಪನ ಭಕ್ತರಿಗೆ ಕೊಂಚ ನೆಮ್ಮದಿಯಾಗಿದೆ.

ಹೌದು, ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆಯಲ್ಲಿ ತಿರುಪತಿ ದೇವಾಲಯ ಶುದ್ಧೀಕರಣ ಕಾರ್ಯ ಸೋಮವಾರ ನಡೆದಿದ್ದು, ತಿರುಮಲದ ದೇವಾಲಯದ ಸುತ್ತ ಅರ್ಚಕರು ಸಂಪ್ರೋಕ್ಷಣೆ ಮಾಡಿ ಹಾಲು, ತುಪ್ಪ, ಮೊಸರು, ಗಂಜಲ, ಸಗಣಿ ಬಳಸಿ ದೇವಾಲಯ ಶುದ್ಧೀಕರಣ ಮಾಡಿದರು.

ಮೊದಲಿಗೆ ಶಾಂತಿ ಹೋಮ ನಡೆದಿದ್ದು, ಬಳಿಕ ತುಪ್ಪ ಬಳಕೆ ಮಾಡಿದ್ದ ಸ್ಥಳದಲ್ಲಿ ಸಂಪ್ರೋಕ್ಷಣೆ ಸಿಂಪಡಣೆ ಮಾಡಲಾಯಿತು. ಅನ್ನ ಪ್ರಸಾದ, ಲಡ್ಡು ತಯಾರಿಕೆ ಸ್ಥಳ, ಗೋದಾಮು ಸೇರಿದಂತೆ ಎಲ್ಲೆಡೆ ಸಂಪ್ರೋಕ್ಷಣೆ ಮಾಡಿದರು.

ಟಿಟಿಡಿ ಇಓ ಜೆ ಶ್ಯಾಮಲಾ ರಾವ್ ನೀಡಿದ ಮಾಹಿತಿಯಂತೆ, ಇಂದಿನಿಂದ ಶ್ರೀನಿವಾಸನ ದೇವಾಲಯದ ಶುದ್ಧೀಕರಣದ ಯಾಗ ನಡೆಯುತ್ತಿದೆ. ಶುದ್ದೀಕರಣ ಸಂದರ್ಭದಲ್ಲಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಪವಿತ್ರೋತ್ಸವ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತೆ ಎಂದರು.

ಮಾಹಿತಿ ಪ್ರಕಾರ, ಬೆಳಗ್ಗೆ 6 ಗಂಟೆಯಿಂದ ದೇವಾಲಯ ಪವಿತ್ರೋತ್ಸವ, ಮಹಾಶಾಂತಿ ಯಾಗ ಆರಂಭವಾಗಿ, ದೇವಾಲಯದ ಸುತ್ತ ಸಂಪ್ರೋಕ್ಷಣೆ ಮಾಡಲಾಯಿತು. ದೇವಾಲಯ ಆವರಣದಲ್ಲಿ ವೇದ ಶಾಸ್ತ್ರ ಪಂಡಿತರು, ಆಗಮಿಕರಿಂದ ಮಹಾ ಶಾಂತಿ ಯಾಗ ನಡೆದಿದ್ದು, ಶುದ್ದೀಕರಣ ಬಳಿಕ ಎಂದಿನಂತೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವರ ದರ್ಶನ ಮಾಡಿ ಭಕ್ತರು ಪುನೀತರಾದರು. ಒಟ್ಟಿನಲ್ಲಿ ಭಕ್ತರ ಮನಸ್ಸಿನಲ್ಲಿರುವ ಅಪವಿತ್ರತೆ ಹೋಗಲಾಡಿಸಲು ಟಿಟಿಡಿಯಿಂದ ಈ ಯಾಗ ನಡೆಯಿತು.

ಕೊನೆಗೆ ಹೋಮ, ಯಾಗ, ಶುದ್ಧೀಕರಣದಲ್ಲಿ ಭಾಗಿಯಾಗಿದ್ದ ಅರ್ಚಕರ ತಂಡವನ್ನು ಎರಡು ಆನೆಗಳ ಸಹಿತ ಅರ್ಚಕರನ್ನು ಟಿಟಿಡಿ ಬೀಳ್ಕೊಟ್ಟಿತು. ಇನ್ನು ಮಹಾ ಶಕ್ತಿ ಹೋಮದ ಬಳಿಕ ಹೊಸ ಬಟ್ಟೆ, ಆಭರಣಗಳನ್ನ ಅರ್ಚಕರು ತೊಡಿಸಿದರು. ಅದರಂತೆ ತಿಮ್ಮಪನಿಗೆ ಹೊಸ ಬಟ್ಟೆ, ಆಭರಣ ತೊಡಿಸಲಾಯಿತು. ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

Leave A Reply

Your email address will not be published.