Dasara tour package: ದಸರಾ ವಿಶೇಷ ಪ್ಯಾಕೇಜ್! ಇಲ್ಲಿದೆ ಮಂಗಳೂರು KSRTC ಪ್ರವಾಸ ಪ್ಯಾಕೇಜ್ ಪಟ್ಟಿ

Dasara tour package: ಕಡಿಮೆ ಖರ್ಚಿನಲ್ಲಿ ದಸರಾ ರಜೆಯನ್ನು ಆನಂದವಾಗಿ ಕಳೆಯಲು ದಸರಾ ಪ್ರಯುಕ್ತ KSRTC ಮಂಗಳೂರು ವಿಭಾಗದ ವತಿಯಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು ಮುರುಡೇಶ್ವರಕ್ಕೆ ವಿಶೇಷ ಪ್ಯಾಕೇಜ್ (Dasara tour package) ಪ್ರವಾಸವನ್ನು ಅಕ್ಟೊಬರ್ 3ರಿಂದ 12ರವರೆಗೆ ಯೋಜಿಸಲಾಗಿದೆ.

ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್:

ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದ ಊಟ ಮುಗಿಸಿ – ಸಸಿಹಿಷ್ಣು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಟ್- ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ ಇಲ್ಲಿ ಸಂಜೆ ಉಪಹಾರ ಮುಗಿಸಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ.

ಒಟ್ಟು ಪ್ರಯಾಣದರ (ಊಟ ಉಪಹಾರ ಹೊರತುಪಡಿಸಿ) ವಯಸ್ಕರಿಗೆ 400 ರೂ. ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) 300 ರೂ ಪ್ರಯಾಣ ದರ ನಿಗದಿಪಡಿಸಲಾಗಿದೆ.

ಮಡಿಕೇರಿ ಪ್ಯಾಕೇಜ್ ಪ್ರವಾಸ:

ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಡಿಕೇರಿ ರಾಜಾಸೀಟ್ -ಅಬ್ಬಿಫಾಲ್ಸ್ ನಿಸರ್ಗಧಾಮ ಸಾಗಿ ಗೋಲ್ಡನ್ ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ), ವಯಸ್ಕರಿಗೆ 500 ರೂ. ಮಕ್ಕಳಿಗೆ 16 ವರ್ಷದಿಂದ 12 ವರ್ಷದವರಿಗೆ) 400 ರೂ. ನಿಗದಿಪಡಿಸಲಾಗಿದೆ.

ಮಂಗಳೂರು- ಕೊಲ್ಲೂರು ಪ್ಯಾಕೇಜ್ ಪ್ರವಾಸ:

ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8 ಗಂಟೆಗೆ ಹೊರಟು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ- ಕಮಲಶಿಲೆ ಶ್ರೀ ಬ್ರಾಹ್ಮ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದ ಊಟ ಮುಗಿಸಿ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ- ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್‌ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ 500 ರು.. ಮಕ್ಕಳಿಗೆ (6- 12 ವರ್ಷದವರಿಗೆ) 400 ರು. ದರ ನಿಗದಿಪಡಿಸಲಾಗಿದೆ.

ಮಂಗಳೂರು ಮುರುಡೇಶ್ವರ ಟೂರ್‌ಪ್ಯಾಕೇಜ್:

ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮುರುಡೇಶ್ವರ ದೇವಸ್ಥಾನ, ಚಂಡಿಕಾ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ, ಕುಂಭಾಶಿ- ಆನೆಗುಡ್ಡೆ ಗಣಪತಿ ದೇವಸ್ಥಾನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂತಿರುಗಲಾಗುತ್ತದೆ (ಊಟ, ಉಪಹಾರ ಹೊರತುಪಡಿಸಿ). ವಯಸ್ಕರಿಗೆ 550 ರೂ. ಮಕ್ಕಳಿಗೆ (6- 12 ವರ್ಷದವರಿಗೆ) 450 ರೂ. ದರ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ : 7760990702, 7760990711, ಒಂದನೇ ಘಟಕ ವ್ಯವಸ್ಥಾಪಕರು, ದೂರವಾಣಿ 7760990713, ಮಂಗಳೂರು-3ನೇ ಘಟಕ ವ್ಯವಸ್ಥಾವಕರು ದೂರವಾಣಿ ಸಂಖ್ಯೆ 7760990723, ಮುಂಗಡ ಬುಕ್ಕಿಂಗ್‌ಕೌಂಟರ್ 9063211553, ಮಂಗಳೂರು ಬಸ್ ನಿಲ್ದಾಣ ದೂರವಾಣಿ ಸಂಖ್ಯೆ: 7760990720 ಸಂಪರ್ಕಿಸುವಂತೆ ಕೆಎಸ್‌ಆರ್‌ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಇನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ http://www.ksrtc.in ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

Leave A Reply

Your email address will not be published.