India-Pakistan: ‘ಪಾಕಿಸ್ತಾನವು ಭಯೋತ್ಪಾದನೆಯ ಕಾರ್ಖಾನೆʼ-ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ ಭಾರತ ಪ್ರತಿನಿಧಿ

India-Pakistan: ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರು ಕಾಶ್ಮೀರ ವಿಷಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ (ಯುಎನ್) ಪ್ರಸ್ತಾಪ ಮಾಡಿದ್ದು, ಇದಕ್ಕೆ ಭಾರತ ತಿರುಗೇಟು ನೀಡಿದೆ. ಭಾರತೀಯ ರಾಜತಾಂತ್ರಿಕರಾದ ಭಾವಿಕಾ ಮಂಗಳಾನಂದನ್ ಅವರು ಯುಎನ್‌ಜಿಎಯಲ್ಲಿ ಪ್ರತ್ಯುತ್ತರ ಹಕ್ಕು ಸಂದರ್ಭದಲ್ಲಿ ಪಾಕಿಸ್ತಾನದ ಪ್ರಧಾನಿ ಮಾಡಿದ ಭಾಷಣಕ್ಕೆ ಪಾಕಿಸ್ತಾನವನ್ನು ಭಯೋತ್ಪಾದನೆಯ ಕಾರ್ಖಾನೆ ಎಂದೂ ಕರೆದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರಲು ಪಾಕಿಸ್ತಾನ ಭಯೋತ್ಪಾದನೆಯನ್ನು ಬಳಸಿಕೊಂಡಿದೆ ಎಂದು ಪಾಕ್ ಪ್ರಧಾನಿ ಭಾವಿಕಾ ಮಂಗಳಾನಂದನ್ ಹೇಳಿದ್ದಾರೆ. ಭಾವಿಕಾ ಮಂಗಳಾನಂದನ್ ಮಾತನಾಡಿ, ಪಾಕಿಸ್ತಾನವು ಜಗತ್ತಿನ ಎಲ್ಲಿಯಾದರೂ ಹಿಂಸಾಚಾರದ ವಿರುದ್ಧ ಮಾತನಾಡುವುದು ಬೂಟಾಟಿಕೆಯಾಗಿದೆ. ಇಂದು ಬೆಳಗ್ಗೆ ಈ ಅಸೆಂಬ್ಲಿಯಲ್ಲಿ (ಯುಎನ್) ಹಾಸ್ಯಾಸ್ಪದ ಘಟನೆ ನಡೆದಿರುವುದು ವಿಷಾದನೀಯ ಎಂದು ಭಾರತೀಯ ರಾಜತಾಂತ್ರಿಕರು ಹೇಳಿದ್ದಾರೆ, ನಾನು ಪಾಕಿಸ್ತಾನದ ಪ್ರಧಾನಿ ಭಾಷಣದಲ್ಲಿ ಭಾರತದ ಉಲ್ಲೇಖದ ಬಗ್ಗೆ ಮಾತನಾಡುತ್ತಿದ್ದೇನೆ. ಜಗತ್ತಿಗೆ ತಿಳಿದಿರುವಂತೆ, ಪಾಕಿಸ್ತಾನವು ತನ್ನ ನೆರೆಹೊರೆಯವರ ವಿರುದ್ಧ ಗಡಿಯಾಚೆಗಿನ ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸಿಕೊಂಡಿದೆ. ಅದು ನಮ್ಮ ಸಂಸತ್ತು, ನಮ್ಮ ಆರ್ಥಿಕ ರಾಜಧಾನಿ ಮುಂಬೈ, ಮಾರುಕಟ್ಟೆಗಳು ಮತ್ತು ಯಾತ್ರಾ ಸ್ಥಳಗಳ ಮೇಲೆ ದಾಳಿ ಮಾಡಿದೆ. ಪಟ್ಟಿ ತುಂಬಾ ಉದ್ದವಾಗಿದೆ”

ಹಿಂಸಾಚಾರದ ಬಗ್ಗೆ ಎಲ್ಲಿಯಾದರೂ ಮಾತನಾಡುವುದು ಪಾಕಿಸ್ತಾನದ ದೊಡ್ಡ ಬೂಟಾಟಿಕೆ ಎಂದು ಭಾರತೀಯ ರಾಜತಾಂತ್ರಿಕ ಭಾವಿಕಾ ಮಂಗಳಾನಂದನ್ ಹೇಳಿದ್ದಾರೆ. ‘ಭಯೋತ್ಪಾದನೆ, ಮಾದಕ ದ್ರವ್ಯ, ವ್ಯಾಪಾರ ಮತ್ತು ಅಂತಾರಾಷ್ಟ್ರೀಯ ಅಪರಾಧಗಳಿಗೆ ವಿಶ್ವದಲ್ಲಿಯೇ ಕುಖ್ಯಾತಿ ಪಡೆದಿರುವ ಮಿಲಿಟರಿ ನಡೆಸುತ್ತಿರುವ ದೇಶ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುವ ದಿಟ್ಟತನ ಹೊಂದಿದೆ’ ಎಂದರು.

ಪಾಕಿಸ್ತಾನದ ಹೈಕಮಿಷನರ್ ಅವರು ಭಾರತದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದರು. ಭಾರತದಲ್ಲಿ ಅಲ್ಪಸಂಖ್ಯಾತರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು. ಆರೆಸ್ಸೆಸ್-ಬಿಜೆಪಿ ಸರ್ಕಾರ ದಲಿತರು, ಅಲ್ಪಸಂಖ್ಯಾತರು ಮತ್ತು ಕಾಶ್ಮೀರಿ ಜನರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಪಾಕಿಸ್ತಾನದ ಹೈಕಮಿಷನರ್ ಆರೋಪಿಸಿದ್ದಾರೆ. ತೆಹ್ರೀಕ್-ಎ-ಪಾಕಿಸ್ತಾನ ಮತ್ತು ಬಲೂಚಿಸ್ತಾನ್ ಸೇನೆಯ ಪರವಾಗಿ ಭಾರತವು ಪಾಕಿಸ್ತಾನದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ.

1 Comment
  1. situs toto says

    Daftar Resmi Sekarang Juga situs togel Terpercaya

Leave A Reply

Your email address will not be published.