Puttur: ಪುತ್ತೂರು: ಪ್ರಪಾತಕ್ಕೆ ಉರುಳಿದ ಬಸ್: ಚಾಲಕ ಮೃತ್ಯು

Puttur: ಅಕ್ಟೊಬರ್ 12 ರ ಮುಂಜಾನೆ ಪುತ್ತೂರಿನ (Puttur) ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಒಂದು ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.

ಅದೃಷ್ಟವಷತ್ ಬಸ್ ನಲ್ಲಿ ಕೇವಲ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave A Reply

Your email address will not be published.