Bantwal: ಮಂಗಳೂರು: ಬಂಟ್ವಾಳದಲ್ಲಿ ನಡುರಾತ್ರಿ ರೌಡಿಶೀಟರ್ಗಳ ತಲ್ವಾರ್ ನಿಂದ ದಾಳಿ!
Bantwal: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಯುವಕರು ಮಧ್ಯರಾತ್ರಿ ತಲ್ವಾರ್ನಿಂದ ಹೊಡೆದಾಡಿಕೊಂಡಿದ್ದು, ಯುವಕರ ಹೊಡೆದಾಟ ವಿಡಿಯೋ ವೈರಲ್ ಆಗಿದೆ.
ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಎರಡು ಗುಂಪಿನ ಯುವಕರು ತಲ್ವಾರ್ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬುವರಿಗೆ ಗಂಭೀರ ಗಾಯವಾಗಿದೆ.
ತಸ್ಲೀಮ್ ಹಾಗೂ ಆತನ ಸ್ನೇಹಿತರು ಮಾತನಾಡುತ್ತ ನಿಂತಿದ್ದರು. ತಸ್ಲೀಮ್ಗೆ ಫೋನ್ನಲ್ಲಿ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮ್ಮೆಮಾರ್ ಶಾಲೆ ಬಳಿ ಬರುವಂತೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲೆ ಬಳಿಗೆ ಹೋದಾಗ ಆರೋಪಿ ಮನ್ಸೂರ್ ಹಾಗೂ ಇತರರು ತಲ್ವಾರ್ನಿಂದ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಸ್ಲೀಮ್ ಬಲಗಾಲು, ಬಲಗೈಗೆ ಗಾಯಗವಾಗಿದೆ. ಇದೇ ವೇಳೆ ಮಹಮ್ಮದ್ ಶಾಕೀರ್ಗೂ ತಲವಾರಿನಿಂದ ಹಲ್ಲೆ ಮಾಡಲಾಗಿದೆ.
ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದ್ದು, ಮುಸ್ತಾಕ ಯಾನೆ ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ದಾಳಿ ಮಾಡಿದ ಆರೋಪಿಗಳು. ಸದ್ಯ ಈ ಪ್ರಕರಣ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.