HomeNewsಉಡುಪಿUdupi: ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ ಪ್ರಕರಣ - ಹೆಂಡ್ತಿ ಪ್ರತಿಮಾಳ ಸ್ಫೋಟಕ...

Udupi: ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ ಪ್ರಕರಣ – ಹೆಂಡ್ತಿ ಪ್ರತಿಮಾಳ ಸ್ಫೋಟಕ ಆಡಿಯೋ ವೈರಲ್

Hindu neighbor gifts plot of land

Hindu neighbour gifts land to Muslim journalist

Udupi: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್​ ನೀಡಿ ಪತ್ನಿ ಕೊಲೆ (kill) ಮಾಡಿರುವಂತಹ ಘಟನೆ ಇದೀಗ ಕರಾವಳಿಯಾದ್ಯಂತ ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಆ ಪಾಪಿ ಹೆಂಡ್ತಿಯ ಸ್ಫೋಟಕ ಆಡಿಯೋ ವೈರಲ್ ಆಗಿದೆ.

ಹೌದು, ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ(Dr Arun K) ಅವರು ಮೃತ ಬಾಲಕೃಷ್ಣ(Balakrishna) ಕೊಲೆ ಕುರಿತಂತೆ ಆರೋಪಿಗಳಾದ ಅವರ ಪತ್ನಿ ಪ್ರತಿಮಾ ಹಾಗೂ ಆಕೆಯ ಗೆಳೆಯ ದಿಲೀಪ್‌ ಹೆಗ್ಡೆ ಅವರು ಸೇರಿ ಕೃತ್ಯ ಮಾಡಿದ್ದಾರೆ. ಇಬ್ಬರನ್ನೂ ಬಂಧನ ಮಾಡಿದ್ದು, ಪ್ರತಿಮಾಗೆ(Pratima) 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿ ದಿಲೀಪ್‌ ಹೆಗ್ಡೆಯನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು. ಇದೀಗ ಈ ಬೆನ್ನಲ್ಲೇ ಗಂಡನ ಹತ್ಯೆಯನ್ನು ಸಹೋದರನ ಬಳಿ ಪತ್ನಿ ಒಪ್ಪಿಕೊಂಡಿದ್ದು, ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ

ಆಡಿಯೋದಲ್ಲಿ ಏನಿದೆ?
ವೈರಲ್ ಆದ ಆಡಿಯೋದಲ್ಲಿ ಏನಿದೆ?
ಸಂದೀಪ್- ಹೌದಾ.. ಅವರು ರಾತ್ರಿ ಬಂದದ್ದು ಹೌದಾ?
ಪ್ರತಿಮಾ- ಬಾಗಿಲು ಹಾಕು ನಾನು ಸಾಯುತ್ತೇನೆ ನನಗೆ ಆಗುವುದಿಲ್ಲ.
ಸಂದೀಪ್- ನೀನು ಸಾಯಿ ನನಗೆ ಬೇಜಾರಿಲ್ಲ ಯಾಕಂದ್ರೆ ನನಗೆ ನನ್ನ ದೇವರೇ ಹೋದರು ಆದರೆ ನೀನು ಅವನನ್ನು ಯಾಕೆ ಕರೆದದ್ದು?

ಪ್ರತಿಮಾ- ನನ್ನದು ತಪ್ಪಾಯ್ತು ನಿಧಾನ ಮಾತನಾಡು.

ಸಂದೀಪ್- ಜೀವನೇ ಹೋಯಿತಲ್ಲ ಅಂತಹ ದೇವರನ್ನ ಯಾಕೆ ಕೊಂದದ್ದು? ನಿನಗೆ ಅವರು ಏನು ಕಷ್ಟ ಕೊಟ್ಟಿದ್ದಾರೆ. ಅವರಿಗೆ ಯಾವುದಾದರೂ ಒಂದು ಹೆಣ್ಣಿನ ಜೊತೆ ಸಂಪರ್ಕ ಇತ್ತಾ? ಮೇಲೆ ಹೋದವರಿಗೊಂದು ನ್ಯಾಯ ಸಿಗಬೇಕಲ್ಲ.

ಪ್ರತಿಮಾ- ನಾನು ಸಾಯುತ್ತೇನೆ ನಾನು ಸಾಯುತ್ತೇನೆ.

ಸಂದೀಪ್- ಕೊಂದದ್ದು ಯಾಕೆ ಹೇಳು?

ಪ್ರತಿಮಾ- ನನ್ನದು ತಪ್ಪಾಯಿತಣ್ಣ.

ಸಂದೀಪ್- ನಾನು ಮನೆಯಿಂದ ಹೋದ ಮೇಲೆ ಅವನನ್ನು ಕರೆಸಿದ್ದಾ? ನಿಜ ಹೇಳು ನಿನಗೆ ಆಗುವ ಶಿಕ್ಷೆ ಕಡಿಮೆ ಮಾಡಿಸುತ್ತೇನೆ. ನಿನ್ನ ಇನ್ನೊಂದು ಮೊಬೈಲ್ ಇದೆಯಲ್ಲ ಎಲ್ಲಿದೆ?

ಪ್ರತಿಮಾ- ನಾನು ಫೋನ್ ಮಾಡಿ ಕರೆಸಿದೆ.

ಸಂದೀಪ್- ಅವನ ಬಳಿ ಹಣ ಇದೆ ಎಂದು ನೀನು ಗಂಡನನ್ನು ಕೊಲ್ಲಿಸಿದೆಯಾ? ಐದಾರು ತಿಂಗಳಿಂದ ನಿಮ್ಮ ನಡುವಿನ ಸಂಬಂಧ ನನಗೆ ಗೊತ್ತಿದೆ.

ಪ್ರತಿಮಾ- ತಪ್ಪಾಯ್ತು ನನ್ನನ್ನು ಕ್ಷಮಿಸು. ಅವರದ್ದು ಒಂದು ಕೆಲಸ ಆಗಲಿ ಆಮೇಲೆ ನಾನು ಸಾಯುತ್ತೇನೆ.

ಸಂದೀಪ್- ನೀನು ಸತ್ತರೂ ಬೇಸರ ಪಡುವುದಿಲ್ಲ. ನಿನ್ನ ಯಾವುದೇ ಮರಣೋತ್ತರದ ಕ್ರಿಯೆ ಕೆಲಸಗಳನ್ನು ಮಾಡುವುದಿಲ್ಲ. ನಿನ್ನ ಹೆಣವನ್ನು ನದಿಗೆ ಬಿಸಾಡುತ್ತೇನೆ. ದೇವರಂತ ಬಾವನನ್ನು ಕೊಂದೆಯಲ್ಲ. ಮಕ್ಕಳನ್ನು ನಾನು ನೋಡಿಕೊಳ್ಳುತ್ತೇನೆ. ಅದರ ತಲೆಬಿಸಿ ಬೇಡ. ಆ ಬೆವರ್ಸಿಯನ್ನು ಕರೆಸಿ ಕೊಲ್ಲಿಸಿದೆಯಲ್ಲ ನಾನು ನಿನಗೆ 18 ವರ್ಷದಲ್ಲಿ ಮದುವೆ ಮಾಡಿಸಿದ್ದೇನೆ. ನಾನು ಜವಾಬ್ದಾರಿ ನಿರ್ವಹಿಸಿದ್ದೇನೆ.

ಪ್ರತಿಮಾ- ಹೊರಗೆ ಎಲ್ಲರಿಗೆ ಕೇಳಿಸುತ್ತಿದೆ ಮೆಲ್ಲ ಮಾತನಾಡು

ಸಂದೀಪ್- ಇಡೀ ಊರಿಗೆ ಗೊತ್ತಾಗಿ ಆಗಿದೆ ಮನೆಯವರಿಗೆ ಗೊತ್ತಾದರೆ ಏನು? ಹಿಂದೆ ಒಮ್ಮೆ ಕೇಸಾದಾಗ ನಾನು ಎಲ್ಲವೂ ಸರಿ ಮಾಡಿದ್ದೆ. ಆ ಮೇಲೆ ನೀವು ಸರಿಯಾಗಬೇಕಾಗಿತ್ತಲ್ಲ? ಅವನೊಬ್ಬನೇ ಬಂದದ್ದಾ? ಬೇರೆ ಯಾರಾದರು ಇದ್ರಾ? ಅಥವಾ ನೀನು ಒಬ್ಬಳೇ ಕೊಂದೆಯಾ?

ಪ್ರತಿಮಾ- ಒಬ್ಬನೇ ಬಂದದ್ದು.

ಸಂದೀಪ್- ನಿನಗೆ ಶಿಕ್ಷೆಯಾಗಬೇಕು. ಬಾವನಿಗೆ ಮೋಕ್ಷ ಸಿಗಬೇಕು. ಅವನ ಬಳಿ ದುಡ್ಡಿದೆ ಎಂದು ನೀನು ಹೋದದ್ದಲ್ವಾ? ನಿನಗೆ ಶಿಕ್ಷೆ ಆಗಬೇಕು. ಪೊಲೀಸನ್ನು ಕರೆಸಬೇಕಾ? ಬೇರೆ ಮೊಬೈಲ್ ಇದೆಯಾ? ನೀನು ಮಕ್ಕಳನ್ನೂ ಕೊಲ್ಲುತ್ತಿದ್ದೆ, ಅವರನ್ನು ಕರೆದುಕೊಂಡು ಹೋದದ್ದಕ್ಕೆ ಅವರು ಬಚಾವ್ ಆದರು. ಹಣದ ಹಿಂದೆ ಹೋದೆ.

ಪ್ರತಿಮಾ- ನಾನು ಡಿಸೈಡ್ ಮಾಡಿದ್ದೇನೆ ನಾನು ಸಾಯುತ್ತೇನೆ.

ಸಂದೀಪ್- ನಾನು ಮರ್ಯಾದೆ ಮರ್ಯಾದೆ ಅಂತ ಸೊರಗಿ ಹೋದೆ. ನಾನು ಮೂರು ತಿಂಗಳಿಂದ ಅನುಭವಿಸಿದ್ದೇನೆ.

 

ಅಂದಹಾಗೆ ಬಾಲಕೃಷ್ಣ ಮತ್ತು ಪ್ರತಿಮಾ 17 ವರ್ಷದ ಹಿಂದೆ ಇಬ್ಬರೂ ಮದುವೆ ಆಗಿದ್ದರು. ದಂಪತಿಗೆ ಎರಡು ಮಕ್ಕಳ್ಳಿದ್ದಾರೆ. 2020ರಲ್ಲಿ ಕೊರೋನಾ ಆವರಿಸಿಕೊಂಡ ನಂತರ ಕುಟುಂಬ ಮುಂಬೈನಿಂದ ಅಜೆಕಾರಿಗೆ ಶಿಫ್ಟ್ ಆಗಿತ್ತು. ಹೊಸ ಮನೆ ಕೂಡ ಕಟ್ಟಿಸಿದ್ದರು. ಅಜೆಕಾರು ಜಂಕ್ಷನ್​ನಲ್ಲಿ ಬ್ಯೂಟಿ ಪಾರ್ಲರ್ ಮಾಡಿಕೊಂಡಿದ್ದ ಪ್ರತಿಮಾ ಮತ್ತು ಕಾರ್ಕಳದಲ್ಲಿ ಬಿಸಿನೆಸ್ ಮ್ಯಾನ್ ಆಗಿರುವ ದಿಲೀಪ್ ಹೆಗ್ಡೆ ಪರಿಚಯ ಆಗಿದೆ. ಪರಿಚಯ ಪ್ರೀತಿಗೆ ತಿರುಗಿ ಬಹಳ ಸಮಯದಿಂದ ಇಬ್ಬರು ಜೊತೆಗೆ ಓಡಾಡಿಕೊಂಡಿದ್ದರು.

RELATED ARTICLES

Most Popular

Recent Comments