Home Crime Kerala: ರೈಲು ಡಿಕ್ಕಿ ಹೊಡೆದು ಪಿಯುಸಿ ವಿದ್ಯಾರ್ಥಿನಿ ಸಾವು!!

Kerala: ರೈಲು ಡಿಕ್ಕಿ ಹೊಡೆದು ಪಿಯುಸಿ ವಿದ್ಯಾರ್ಥಿನಿ ಸಾವು!!

Hindu neighbor gifts plot of land

Hindu neighbour gifts land to Muslim journalist

Kerala: ರೈಲು ಹಳಿ ದಾಟುವಾಗ ವಿದ್ಯಾರ್ಥಿನಿಯೊಬ್ಬಳಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೇರಳದ(Kerala) ಮಯನಾಡು ರೈಲು ನಿಲ್ದಾಣದಲ್ಲಿ ನಡೆದಿದೆ.

ಮಯನಾಡು ಹೈಯರ್ ಸೆಕೆಂಡರಿ ಶಾಲೆಯ ದ್ವಿತಿಯ ಪಿಯುಸಿ ವಿದ್ಯಾರ್ಥಿನಿ ದೇವಾನಂದ ಮಾಯನಾಡು ರೈಲು ನಿಲ್ದಾಣದಲ್ಲಿ ಹಳಿ ದಾಟಿ ಪ್ಲಾಟ್‌ಫಾರ್ಮ‌ಗೆ ಹತ್ತಲು ಯತ್ನಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ದೇವಾನಂದ (17) ಎಂದು ಗುರುತಿಸಲಾಗಿದೆ.

ಮಯನಾಡು ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್‌ನಲ್ಲಿ ನಿಲುಗಡೆಗೊಂಡಿದ್ದ ನಾಗರ್‌ಕೋಯಿಲ್-ಕೊಟ್ಟಾಯಂ ಪ್ಯಾಸೆಂಜರ್ ರೈಲು ಅದರ ಮುಂಭಾಗದ ಹಳಿಯನ್ನು ದಾಟಿ ಎರಡನೇ ಪ್ಲಾಟ್‌ಫಾರ್ಮ್‌ಗೆ ಪ್ರವೇಶಿಸಿದಾಗ ನೇತ್ರಾವತಿ ಎಕ್ಸ್ಪ್ರೆಸ್ ಬಂದಿದೆ. ದೇವಾನಂದ ತನ್ನ ಸಹಪಾಠಿಗಳೊಂದಿಗೆ ರೈಲ್ವೇ ಪ್ರವೇಶಿಸಿ ಜೊತೆಯಲ್ಲಿದ್ದ ಇತರ ವಿದ್ಯಾರ್ಥಿಗಳು ಪ್ಲಾಟ್‌ಫಾರ್ಮ್ಗೆ ಎಳೆದೊಯ್ದರು, ಆದರೆ ದೇವಾನಂದ ರೈಲಿಗೆ ಡಿಕ್ಕಿ ಹೊಡೆದು ಜೀವ ಕಳೆದುಕೊಂಡಿದ್ದಾರೆ.