Belagavi: ಮಹಾಕುಂಭಕ್ಕೆ ತೆರಳುತ್ತಿದ್ದವರ ವಾಹನ ಪಲ್ಟಿ; ಆರು ಮಂದಿ ದುರ್ಮರಣ

Share the Article

Belagavi: ಉತ್ತರ ಪ್ರದೇಶದ ಪ್ರಯಗ್‌ರಾಜ್‌ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಮೂಲದ 8 ಜನರು ಪ್ರಯಾಣ ಮಾಡುತ್ತಿದ್ದ ಗಾಡಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾಗಿದ್ದು, ಸೋಮವಾರ ಬೆಳಗಿನ ಜಾವ ನಡೆದ ಈ ರಸ್ತೆ ಅಪಘಾತದಲ್ಲಿ ಆರು ಜನರು ಮೃತ ಹೊಂದಿದ್ದಾರೆ.

 

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ನಿವಾಸಿಗಲು ಎಂದು ತಿಳಿದು ಬಂದಿದೆ. ಗಾಯಗೊಂಡ ಇಬ್ಬರನ್ನು ಜಬಲ್ಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Comments are closed.