Puttur: ಪುತ್ತೂರು; ಕಾರು-ಆಕ್ಟಿವಾ ನಡುವೆ ಅಪಘಾತ; ಸವಾರ ಸಾವು

Share the Article

Puttur: ಕಾರು ಮತ್ತು ಆಕ್ಟಿವಾ ನಡುವೆ ಅಪಘಾತವೊಂದು ಸಂಭವಿಸಿದ್ದು, ಆಕ್ಟಿವಾ ಸವಾರ ಸಾವಿಗೀಡಾದ ಘಟನೆ ಕಬಕದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಇಡ್ಕಿದು ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಘಟನಾ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

Comments are closed.