ಸೌಜನ್ಯ ಪ್ರಕರಣ: ಸಮೀರ್ ಬಂಧನಕ್ಕೆ ಹೊರಟ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಹೈಕೋರ್ಟ್!

Soujanya murder: ಕರ್ನಾಟಕದಲ್ಲಿ ಸೌಜನ್ಯ ಪ್ರಕರಣ ದೊಡ್ಡ ಸಂಚಲನವನ್ನೇ ಉಂಟು ಮಾಡಿತ್ತು. ಯೂಟ್ಯೂಬರ್ ಸಮೀರ್ ಎಂ ಡಿ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದರು. ಈ ವೀಡಿಯೋ ಒಂದು ಮಿಲಿಯನ್ ವ್ಯೂವ್ಸ್ ಪಡೆದು ವೈರಲ್ ಆಗುತ್ತಿದ್ದಂತೆ ಪೊಲೀಸರು ಆಗಮಿಸಿ ಬಂಧನಕ್ಕೆ ಮುಂದಾಗಿದ್ದು, ನಂತರ ವಿಚಾರಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ ಮೇಲೆ ನೋಟಿಸ್ ನೀಡಿ ಹಿಂದಿರುಗಿದ್ದಾರೆ ಎಂದು ಫೇಸ್ ಬುಕ್ ಲೈವ್ನಲ್ಲಿ ಸಮೀರ್ ಹೇಳಿದ್ದರು.

ಈ ಕುರಿತು ಪರ-ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿತ್ತು. ಅನಂತರ ಇದೀಗ ಗಿರೀಶ್ ಮಟ್ಟಣ್ಣನವರ್ ಅವರ ವಕೀಲರ ತಂಡ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ಇದೀಗ ಕಾನೂನು ಉಲ್ಲಂಘಿಸಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಹಾಗಾಗಿ ಈ ಮೂಲಕ ಸಮೀರ್ ಗೆ ಬಿಗ್ ರಿಲೀಫ್ ದೊರಕಿದಂತಾಗಿದೆ. ಅರೆಸ್ಟ್ ಮಾಡುವ ಹಾಗಿಲ್ಲ, ಪೊಲೀಸ್ ಠಾಣೆಗೂ ಕರೆಯುವ ಹಾಗಿಲ್ಲ ಎಂದು ಕೋರ್ಟ್ ಹೇಳಿದೆ ಎಂದು ಗಿರೀಶ್ ಮಟ್ಟಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


Comments are closed.