Putturu : ಬಸ್ಸಿನಲ್ಲಿ ಅಪ್ರಾಪ್ತ ಬಾಲಕನಿಂದ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ – ಚಿಕ್ಕಪ್ಪ, ಮಾವನಿಂದಲೇ ಪ್ರಚೋದನೆ- ಕ್ರಮಕ್ಕೆ ಆಗ್ರಹ!!

Putturu : ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಾಲೇಜಿಗೆ ಬರುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿ ನಿಗೆ ಅಪ್ರಾಪ್ತ ಬಾಲಕನೋರ್ವ ಕಿರುಕುಳ ನೀಡುತ್ತಿರುವಂತ ಘಟನೆ ಪುತ್ತೂರಿನಲ್ಲಿ(ಪುತ್ತೂರು) ನಡೆದಿದೆ.

ಹೌದು, ಬೆಳ್ತಂಗಡಿ ಕಡೆಯಿಂದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪುತ್ತೂರು ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಗೆ ಅದೇ ಬಸ್‌ನಲ್ಲಿದ್ದ ಪುತ್ತೂರು ಖಾಸಗಿ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಕಿರುಕುಳ ನೀಡಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಆ ಹುಡುಗನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಚಾರಣೆ ಬಳಿಕ ಅಚ್ಚರಿ ಸಂಗತಿ ಒಂದು ಬಹಿರಂಗವಾಗಿದೆ. ಆತ ಗೇರುಕಟ್ಟೆಯ ನಿವಾಸಿಯಾಗಿದ್ದು, ಈ ಕೃತ್ಯ ಎಸಗಲು ಆತನ ಮಾವ ಮತ್ತು ಚಿಕ್ಕಪ್ಪನ ಪ್ರಚೋದನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಯುವಕ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾನೆ.

ಇನ್ನೂ ಘಟನೆಯ ಬಗ್ಗೆ ಪುತ್ತೂರು ಬಿಜೆಪಿ ನಿಯೋಗ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಮತ್ತು ಆತನಿಗೆ ಪ್ರಚೋದನೆ ನೀಡಿದ ಸಂಬಂಧಿಕರಿಬ್ಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ

Comments are closed.